22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಎರಡು ದಿನದ ರಾಜ್ಯ ಮಟ್ಟದ ವಿಜ್ಞಾನ ಮೇಳದ ಎಕ್ಸ್‌ಪೀರಿಯ- 2ಕೆ22 ಕಾರ್ಯಕ್ರಮವು ಡಿ. 22ರಂದು ವಿದ್ಯುಕ್ತವಾಗಿ ಆರಂಭಗೊಂಡಿತು.
ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮೇಳವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ,
ನಂಬಿಕೆ ಮತ್ತು ವಿಶ್ವಾಸದಿಂದ ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಾಯಿತು. ನಾವು ನಮ್ಮ ಜೀವನದ ಉದ್ದೇಶಗಳನ್ನು ತಿಳಿದುಕೊಂಡು ಪೂರ್ಣರೀತಿಯ ಮಾಹಿತಿಯನ್ನು ಯಾವುದೇ ರೀತಿಯಲ್ಲಿ ಮುನ್ನಡೆಸಿದರೆ ಅದನ್ನು ಯಶಸ್ವಿಯಾಗಿ ಮಾಡಲು ಸೂಚಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ, ಇವರು ವಹಿಸಿ ಮಾತನಾಡಿ, ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಮತ್ತು ಮೌಲ್ಯಾಧಾರಿತ ಶಿಕ್ಷಣದಿಂದ ಪ್ರಸಿದ್ಧವಾಗಿದೆ, ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾರ್ಥಿಗಳು, ತಂತ್ರಜ್ಞರು ಆಗಬೇಕು. ಹೃದಯ ವೈಶಾಲ್ಯವಿರುವ ಸುಶಿಕ್ಷಿತ ಸಮಾಜವನ್ನು ನಿರ್ಮಿಸುವುದು ನಮ್ಮ ಶಿಕ್ಷಣ ಸಂಸ್ಥೆಗಳ ಧ್ಯೇಯವಾಗಿದೆ ಎಂದು ಹೇಳಿದರು.
ಎರಡು ದಿನಗಳ ಕಾಲ ನಡೆಯುವ ಮೇಳದಲ್ಲಿ ವಿಜ್ಞಾನ ರಸಪ್ರಶ್ನೆ, ಗಣಿತದ ಒಗಟು, ಹ್ಯಾಕಥಾನ್, ಸಿ.ಲ್ಯಾಗ್ವೆಜ್ ರಸಪ್ರಶ್ನೆ, ವಿಜ್ಞಾನ ಮಾದರಿ ತಯಾರಿ, ಟ್ರೆಷರ್ ಹಂಟ್ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಂಜೆ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಶ್ರೀ ಧರ್ಮ ಕ್ಷೇತ್ರ ಮಹಾತ್ಮ ಎಂಬ ಹೊನಲು ಬೆಳಕಿನ `ದೃಶ್ಯರೂಪಕ’ವನ್ನು ಅಳವಡಿಸಲಾಗಿದೆ.
ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯಕ್ರಮ ಸಂಯೋಜಕರಾದ ರವೀಶ್ ಪಡುಮಲೆ ವೇದಿಕೆಯಲ್ಲಿ.
ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ಟಿ. ಸ್ವಾಗತಿಸಿದರು. ಡಾ. ಸಂಜಯ್ ಕಾರ್ಯಕ್ರಮ ನಿರೂಪಿಸಿ, ಸಂಯೋಜಕ ರವೀಶ್ ಉಡುಗೊರೆ.

Related posts

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya
error: Content is protected !!