22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕರಾವಳಿಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

ಮಂಗಳೂರು: ನಾವೆಲ್ಲ ಅಭಿಮಾನಿಗಳು ಅವರ ನೆಚ್ಚಿನ ತಾರೆಯರಿಗೆ ಟೆಂಪಲ್ ಕಟ್ಟೋದು, ಅವರ ಹೆಸರುಗಳನ್ನು ತಮ್ಮ ಮನೆಗಳಿಗೆ, ಅಂಗಡಿಗಳಿಗೆ ಇಡೋದು ಇಲ್ಲಾ ಮಕ್ಕಳಿಗೆ ಅವರದ್ದೇ ಹೆಸರಿಡೋದನ್ನು ನೋಡಿದ್ದೇವೆ.ಆದ್ರೆ ಇಲ್ಲೊಬ್ಬ ಕಂಬಳ ಅಭಿಮಾನಿ ತನ್ನ ಹೋಟೆಲ್ ಗೆ ಕಂಬಳ ಕೋಣದ ಹೆಸರಿಟ್ಟು ಅಭಿಮಾನ ವ್ಯಕ್ತಪಡಿಸಿದ್ದಾರೆ.

ಹೌದು ಕಂಬಳ ಲೋಕದ ಕಿಂಗ್ ಎಂದು ಗುರುತಿಸಿಕೊಂಡಿರುವ ಕೋಣ ತಾಟೆಗೆ ಕಂಬಳದ ಅಭಿಮಾನಿಯೊಬ್ಬರು ತಮ್ಮ ಹೋಟೆಲ್ ಗೆ ಅದರ ಹೆಸರನ್ನು ಇಡುವ ಮೂಲಕ ಗೌರವ ಅರ್ಪಿಸಿದ್ದಾರೆ. ಪಾಣೆ ಮಂಗಳೂರಿನಿಂದ 2 ಕಿಲೋಮೀಟರ್ ದೂರದ ಶಂಭೂರು ಗ್ರಾಮದಲ್ಲಿ ಊಟದ ಹೋಟೆಲ್‌ಗೆ ‘ಇರುವೈಲ್ ತಾಟೆ’ ಎಂದು ಹೆಸರಿಡಲಾಗಿದೆ.

ಕಂಬಳ ಅಭಿಮಾನಿಯಾಗಿರುವ ಜಯಂತ್ ಅಂಚನ್ ಅವರು ತಮ್ಮ ‘ಶಿವ ಶಕ್ತಿ’ ಫಾಸ್ಟ್ ಫುಡ್ ಕೇಂದ್ರವನ್ನು ಹೋಟೆಲ್ ಆಗಿ ಪರಿವರ್ತಿಸಿದ್ದು ಇದಕ್ಕೆ ಕಂಬಳಕ್ಕೆ ಸಂಬಂಧಿಸಿದ ಹೆಸರು ಇರಿಸಿದ್ದಾರೆ. ಜಯಂತ್ ಅಪ್ಪಟ ಕಂಬಳ ಅಭಿಮಾನಿಯಾಗಿದ್ದು, ಜಿಲ್ಲೆಯಲ್ಲಿ ಎಲ್ಲೇ ಕಂಬಳ ನಡೆದರೂ ಕೂಡ ಜಯಂತ್ ಅಲ್ಲಿರುತ್ತಾರೆ. ಹೀಗಿರುವಾಗ 8 ವರ್ಷಗಳ ಹಿಂದೆ ‘ತಾಟೆ’ ಅವರ ಕಣ್ಣಿಗೆ ಬಿದ್ದಿದೆ. ಅದರ ಓಟದ ಪರಿಗೆ ಫಿದಾ ಆದ ಅವರು ಕ್ರಮೇಣ ಅದರ ಅಭಿಮಾನಿಯಾದರು. ಈ ಪ್ರೀತಿ ಹೋಟೆಲ್ ಹೆಸರಿನ ರೂಪದಲ್ಲಿ ವ್ಯಕ್ತವಾಗಿದೆ
‘ತಾಟೆ ಅಪ್ರತಿಮ ಓಟಗಾರ, ಕಂಬಳದಲ್ಲಿ ಎರಡು ಕೋಣಗಳು ಜೊತೆಯಾಗಿ ಓಡುತ್ತವೆ. ಸಾಮಾನ್ಯವಾಗಿ ಅವೆರಡೂ ಜೊತೆಯಾಗಿ ಅಂತಿಮ ಗೆರೆಯತ್ತ ಧಾವಿಸುತ್ತವೆ. ಆದರೆ ತಾಟೆ ತನ್ನ ಜೊತೆಯನ್ನು ಹಿಂದಿಕ್ಕಿ ಮುನ್ನುಗ್ಗುತ್ತದೆ. ಹೀಗಾಗಿ ಅದರ ಫಿನಿಶಿಂಗ್ ನೋಡುವುದು ಕಣ್ಣಿಗೆ ಆನಂದ. ಅದರ ಓಟವನ್ನು ನೋಡುತ್ತ ನೋಡುತ್ತ ಅಭಿಮಾನಿಯಾದೆ. ಹೋಟೆಲ್‌ಗೆ ಆ ಕೋಣದ ಹೆಸರಿಡಲು ನಿರ್ಧರಿಸಿದ್ದೆ ಎಂದು ತಿಳಿಸಿದ್ದಾರೆ.

Related posts

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಜೈನ ಧರ್ಮದ ಯುಗ ಪ್ರವರ್ತಕ : ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಜಿನೈಕ್ಯ

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!