April 2, 2025
ಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

ಓಡಿಲ್ನಾಳ: ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವವೂ ಡಿ.25ರಿಂದ ಜ.3ರವರೆಗೆ ಧಾರ್ಮಿಕ.ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಭ್ರಂಭಣೆಯಿಂದ ನಡೆಯಲಿದೆ.
1 ಸಾವಿರ ವರ್ಷಗಳ ಹಿಂದೆ ಬಂಗರಸರು ತಮ್ಮ ಸೈನ್ಯವನ್ನು ಶತ್ರು ಕೃತ್ಯಗಳಿಂದ ಸಂರಕ್ಷಿಸುವ ಉದ್ದೇಶದಿಂದ ಸೋಮಯಾಗವನ್ನು ಮಾಡಿಸಿ ಈ ಯಾಗದಿಂದ ಅವಿರ್ಭವಿಸಿದ ಶಕ್ತಿಯನ್ನು ಶ್ರೀಕ್ಷೇತ್ರ ಕಿರಾತ ಮೂರ್ತಿ ಸ್ವರೂಪದಲ್ಲಿ ಆರಾಧಿಸಿಕೊಂಡು ಬರುತ್ತಿದ್ದು.
ಆ ಪ್ರಕಾರವಾಗಿ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವರಿಗೆ ವೃತ್ತಾಕಾರ ಶಿಲಾಮಯ ಗರ್ಭಗುಡಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಗುಡಿ .ಶ್ರೀ ಗಣಪತಿ ದೇವರ ಗುಡಿ ಮತ್ತು ಶ್ರೀ ನಾಗದೇವರಿಗೆ ಕಟ್ಟೆಗಳನ್ನು ವಾಸ್ತು ಪ್ರಕಾರವಾಗಿ ನಿರ್ಮಾಣ ಮಾಡಿ ದೇವರ ಶಿವಲಿಂಗವನ್ನು ಬೆಳಾಲು ಶ್ರೀ ಮಾಯಾ ಮಹಾದೇವ ದೇವಸ್ಥಾನದಿಂದ ಡಿ.22ರಂದು ಎತ್ತಿನ ಗಾಡಿಯ ಮೂಲಕ ಪ್ರಾತ:ಕಾಲ ಗಂಟೆ 4 ರಿಂದ ಉಜಿರೆ ಬೆಳ್ತಂಗಡಿ ಗುರುವಾಯನ ಕೆರೆಯಲ್ಲಿ ವಿಶೇಷ ಪೂಜೆ ನೆರವೇರಿಸಿ ರೇಷ್ಮೆರೋಡು ಮಾರ್ಗವಾಗಿ ಭವ್ಯ ಶೋಭೆ ಯಾತ್ರೆಯೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಬಾಲಾಲಯದಲ್ಲಿ ಪ್ರತಿಷ್ಠಾಪನೆಗೊಂಡು ಮಧ್ಯಾಹ್ನ 12:30ಕ್ಕೆ ಪೂಜೆ ನಡೆಯಲಿದೆ
ಡಿ.25ರಂದು ಬೆಳಗ್ಗೆ 11ಗಂಟೆಗೆ ಓಡಿಲ್ನಾಳ,.ಮಚ್ಚಿನ .ಕಳಿಯ. ನ್ಯಾಯತರ್ಪು .ಕುವೆಟ್ಟು. ಪಡಂಗಡಿ .ಸೋಣಂದೂರು. ಬೆಳ್ತಂಗಡಿ ನಗರ ಗ್ರಾಮಸ್ಥರಿಂದ ಹಸಿರುವಾಣಿ ಹೊರ ಕಾಣಿಕೆಯ ಭವ್ಯ ಶೋಭೆ ಯಾತ್ರೆ ನಡೆಯಲಿ ನಡೆಯಲಿದೆ
ಈಗಾಗಲೇ ಬ್ರಹ್ಮ ಕಲಸಶೋತ್ಸವದ ಪೂರ್ವಸಿದ್ಧತೆ ತಯಾರುಗಳು ಭರದಿಂದ ಸಾಗುತಿದೆ .ಊರ ಪರ ಊರ ಭಕ್ತರು ಪ್ರತಿದಿನ ಶ್ರಮದಾನ ಮೂಲಕ ಕರಸೇವೆ ಮಾಡುತ್ತಿದ್ದಾರೆ. ದೇವಾಲಯದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಕೆಲಸಗಳು ಜನರ ಸಹಕಾರ ಹಾಗೂ ಶ್ರಮದಾನದಿಂದಲೇ ನಡೆದಿದೆ ಎನ್ನುತ್ತಾರೆ ದೇವಾಲಯದ ಆಡಳಿತ ಮಂಡಳಿ ಸದಸ್ಯರು.ಬ್ರಹ್ಮ ಕಲಸಶೋತ್ಸವಕ್ಕೆ ಊರ ಹಾಗೂ ಪರವೂರ ಸಾವಿರಾರು ಭಕ್ತರು ಆಗಮಿಸುತ್ತಿದ್ದು ಈಗಾಗಲೇ ಸಭಾವೇದಿಕೆ, ಅನ್ನ ಛತ್ರ, ಮಂಟಪ .ಅಲಂಕಾರ .ಚಪ್ಪರದ ಕೆಲಸ ಕಾರ್ಯಗಳು ಬರದಿಂದ ಸಾಗುತ್ತಿದೆ.

Related posts

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya
error: Content is protected !!