26.9 C
ಪುತ್ತೂರು, ಬೆಳ್ತಂಗಡಿ
April 23, 2026
ಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

ಓಡಿಲ್ನಾಳ: ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವವೂ ಡಿ.25ರಿಂದ ಜ.3ರವರೆಗೆ ಧಾರ್ಮಿಕ.ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಭ್ರಂಭಣೆಯಿಂದ ನಡೆಯಲಿದೆ.
1 ಸಾವಿರ ವರ್ಷಗಳ ಹಿಂದೆ ಬಂಗರಸರು ತಮ್ಮ ಸೈನ್ಯವನ್ನು ಶತ್ರು ಕೃತ್ಯಗಳಿಂದ ಸಂರಕ್ಷಿಸುವ ಉದ್ದೇಶದಿಂದ ಸೋಮಯಾಗವನ್ನು ಮಾಡಿಸಿ ಈ ಯಾಗದಿಂದ ಅವಿರ್ಭವಿಸಿದ ಶಕ್ತಿಯನ್ನು ಶ್ರೀಕ್ಷೇತ್ರ ಕಿರಾತ ಮೂರ್ತಿ ಸ್ವರೂಪದಲ್ಲಿ ಆರಾಧಿಸಿಕೊಂಡು ಬರುತ್ತಿದ್ದು.
ಆ ಪ್ರಕಾರವಾಗಿ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವರಿಗೆ ವೃತ್ತಾಕಾರ ಶಿಲಾಮಯ ಗರ್ಭಗುಡಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಗುಡಿ .ಶ್ರೀ ಗಣಪತಿ ದೇವರ ಗುಡಿ ಮತ್ತು ಶ್ರೀ ನಾಗದೇವರಿಗೆ ಕಟ್ಟೆಗಳನ್ನು ವಾಸ್ತು ಪ್ರಕಾರವಾಗಿ ನಿರ್ಮಾಣ ಮಾಡಿ ದೇವರ ಶಿವಲಿಂಗವನ್ನು ಬೆಳಾಲು ಶ್ರೀ ಮಾಯಾ ಮಹಾದೇವ ದೇವಸ್ಥಾನದಿಂದ ಡಿ.22ರಂದು ಎತ್ತಿನ ಗಾಡಿಯ ಮೂಲಕ ಪ್ರಾತ:ಕಾಲ ಗಂಟೆ 4 ರಿಂದ ಉಜಿರೆ ಬೆಳ್ತಂಗಡಿ ಗುರುವಾಯನ ಕೆರೆಯಲ್ಲಿ ವಿಶೇಷ ಪೂಜೆ ನೆರವೇರಿಸಿ ರೇಷ್ಮೆರೋಡು ಮಾರ್ಗವಾಗಿ ಭವ್ಯ ಶೋಭೆ ಯಾತ್ರೆಯೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಬಾಲಾಲಯದಲ್ಲಿ ಪ್ರತಿಷ್ಠಾಪನೆಗೊಂಡು ಮಧ್ಯಾಹ್ನ 12:30ಕ್ಕೆ ಪೂಜೆ ನಡೆಯಲಿದೆ
ಡಿ.25ರಂದು ಬೆಳಗ್ಗೆ 11ಗಂಟೆಗೆ ಓಡಿಲ್ನಾಳ,.ಮಚ್ಚಿನ .ಕಳಿಯ. ನ್ಯಾಯತರ್ಪು .ಕುವೆಟ್ಟು. ಪಡಂಗಡಿ .ಸೋಣಂದೂರು. ಬೆಳ್ತಂಗಡಿ ನಗರ ಗ್ರಾಮಸ್ಥರಿಂದ ಹಸಿರುವಾಣಿ ಹೊರ ಕಾಣಿಕೆಯ ಭವ್ಯ ಶೋಭೆ ಯಾತ್ರೆ ನಡೆಯಲಿ ನಡೆಯಲಿದೆ
ಈಗಾಗಲೇ ಬ್ರಹ್ಮ ಕಲಸಶೋತ್ಸವದ ಪೂರ್ವಸಿದ್ಧತೆ ತಯಾರುಗಳು ಭರದಿಂದ ಸಾಗುತಿದೆ .ಊರ ಪರ ಊರ ಭಕ್ತರು ಪ್ರತಿದಿನ ಶ್ರಮದಾನ ಮೂಲಕ ಕರಸೇವೆ ಮಾಡುತ್ತಿದ್ದಾರೆ. ದೇವಾಲಯದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಕೆಲಸಗಳು ಜನರ ಸಹಕಾರ ಹಾಗೂ ಶ್ರಮದಾನದಿಂದಲೇ ನಡೆದಿದೆ ಎನ್ನುತ್ತಾರೆ ದೇವಾಲಯದ ಆಡಳಿತ ಮಂಡಳಿ ಸದಸ್ಯರು.ಬ್ರಹ್ಮ ಕಲಸಶೋತ್ಸವಕ್ಕೆ ಊರ ಹಾಗೂ ಪರವೂರ ಸಾವಿರಾರು ಭಕ್ತರು ಆಗಮಿಸುತ್ತಿದ್ದು ಈಗಾಗಲೇ ಸಭಾವೇದಿಕೆ, ಅನ್ನ ಛತ್ರ, ಮಂಟಪ .ಅಲಂಕಾರ .ಚಪ್ಪರದ ಕೆಲಸ ಕಾರ್ಯಗಳು ಬರದಿಂದ ಸಾಗುತ್ತಿದೆ.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya
error: Content is protected !!