25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

ಉಜಿರೆ: ಉಜಿರೆ ಸಮೀಪದ ನೀರ ಚಿಲುಮೆ ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆಯ ನರ್ಸರಿಯಲ್ಲಿ ಮಣ್ಣಿನ ಅಡಿಯಲ್ಲಿ ಡಿ.22ರಂದು 28 ಮೊಟ್ಟೆಗಳು ಪತ್ತೆಯಾಗಿವೆ. .

ಗಿಡಗಳನ್ನು ಬೆಳೆಸಲು ರಾಶಿ ಹಾಕಿರುವ ಮಣ್ಣಿನ ಅಡಿಯಲ್ಲಿ ಮೊಟ್ಟೆಗಳನ್ನು ಹೊಂದಿದೆ. ಬೆಳಿಗ್ಗೆ ನರ್ಸರಿ ತೊಟ್ಟೆಗಳಿಗೆ ಮಣ್ಣನ್ನು ತುಂಬುತ್ತಿರುವ ವೇಳೆಯಲ್ಲಿ ಕೆಲಸಗಾರರು ಮೊಟ್ಟೆಯನ್ನು ಗುರುತಿಸಿದ್ದು ಇದನ್ನು ಗಮನಿಸಿದ ನರ್ಸರಿಯ ಯೋಜನಾಧಿಕಾರಿ ದಯಾನಂದ್ ಇವರು ಜನಜಾಗೃತಿ ಪ್ರಾದೇಶಿಕ ಕಚೇರಿಯ ವಿಪತ್ತು ನಿರ್ವಹಣಾ ವರದಿಯನ್ನು ನೀಡಿದ್ದರು. ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ ಇವರ ಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳದ ಶೌರ್ಯ ಸಮಿತಿಯ ಮಾಸ್ಟರ್ ಹಾಗೂ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ಇವರಿಗೆ ಮಾಹಿತಿ ನೀಡಿದ್ದರು. ಬೆಳ್ತಂಗಡಿಯ ಊರ ಪ್ರೇಮಿ ಅಶೋಕ ಇವರಲ್ಲಿಯೂ ಈ ಬಗ್ಗೆ ಚರ್ಚಿಸಿ ಸುರಕ್ಷಿತವಾಗಿ ಸಂರಕ್ಷಿಸುವ ಬಗ್ಗೆ ಮಾಹಿತಿ ಪಡೆದಿದ್ದರು.

ಸರಿಯಾದ ಮಾಹಿತಿ ಪಡೆಯುವ ಉದ್ದೇಶದಿಂದ ಸ್ಥಳಕ್ಕೆ ಧಾವಿಸಿದ ಸ್ನೇಕ್ ಪ್ರಕಾಶ್ ಅವರು ಪುತ್ತೂರಿನ ರವೀಂದ್ರ ನಾಥ್ ಐತಾಳ ಇವರಿಗೆ ಪತ್ತೆಯಾದ ಮೊಟ್ಟೆಯ ಬಗ್ಗೆ ಮಾಹಿತಿ ನೀಡಲಾಯಿತು ಅವರು ಮೊಟ್ಟೆಗಳನ್ನು ಸುರಕ್ಷಿತವಾಗಿ ತಂಪಾದ ಮಣ್ಣಿನ ಅಡಿಯಲ್ಲಿ ಇಡಬೇಕು. ಸುಮಾರು 60-70 ದಿನದಲ್ಲಿ ಮೊಟ್ಟೆಗಳು ಮರಿಯಾಗುತ್ತವೆ. ಬಿಸಿಲು ಸ್ಥಳದಲ್ಲಿ ಇದ್ದಲ್ಲಿ ಮೊಟ್ಟೆಗಳು ಹಾಳಾಗಬಹುದು ಎಂದಿದ್ದರು. ಮತ್ತು ಸುರಕ್ಷಿತವಾಗಿ ಮೊಟ್ಟೆಯನ್ನು ತಂದು ಕೊಟ್ಟಲ್ಲಿ ಮರಿ ಮಾಡಿ ತಾವೇ ಬಿಡುವುದಾಗಿ ತಿಳಿಸಲಾಗಿದೆ. ಇದಕ್ಕೆ ಪೂರಕವಾದ ಸ್ನೇಕ್ ಪ್ರಕಾಶ್ ಇವರು ಮೊಟ್ಟೆಗಳನ್ನು ಪುತ್ತೂರಿಗೆ ಒಯ್ದು ಐತಾಳ ಇವರಿಗೆ ಕೊಟ್ಟು ಬಂದಿರುತ್ತಾರೆ. ಕೋಳಿ ಮೊಟ್ಟೆಯ ಗಾತ್ರಕ್ಕಿಂತ ಚಿಕ್ಕದಾದ ಉದ್ದನೆಯ ಮೊಟ್ಟೆ ಇದಾಗಿದ್ದರೆ , ಉಡದ ಮೊಟ್ಟೆ ಇರಬಹುದು ಎಂದು ಅಂದಾಜಿಸಲಾಗುತ್ತಿದೆ.

Related posts

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya
error: Content is protected !!