22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

ಉಜಿರೆ: ಉಜಿರೆ ಸಮೀಪದ ನೀರ ಚಿಲುಮೆ ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆಯ ನರ್ಸರಿಯಲ್ಲಿ ಮಣ್ಣಿನ ಅಡಿಯಲ್ಲಿ ಡಿ.22ರಂದು 28 ಮೊಟ್ಟೆಗಳು ಪತ್ತೆಯಾಗಿವೆ. .

ಗಿಡಗಳನ್ನು ಬೆಳೆಸಲು ರಾಶಿ ಹಾಕಿರುವ ಮಣ್ಣಿನ ಅಡಿಯಲ್ಲಿ ಮೊಟ್ಟೆಗಳನ್ನು ಹೊಂದಿದೆ. ಬೆಳಿಗ್ಗೆ ನರ್ಸರಿ ತೊಟ್ಟೆಗಳಿಗೆ ಮಣ್ಣನ್ನು ತುಂಬುತ್ತಿರುವ ವೇಳೆಯಲ್ಲಿ ಕೆಲಸಗಾರರು ಮೊಟ್ಟೆಯನ್ನು ಗುರುತಿಸಿದ್ದು ಇದನ್ನು ಗಮನಿಸಿದ ನರ್ಸರಿಯ ಯೋಜನಾಧಿಕಾರಿ ದಯಾನಂದ್ ಇವರು ಜನಜಾಗೃತಿ ಪ್ರಾದೇಶಿಕ ಕಚೇರಿಯ ವಿಪತ್ತು ನಿರ್ವಹಣಾ ವರದಿಯನ್ನು ನೀಡಿದ್ದರು. ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ ಇವರ ಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳದ ಶೌರ್ಯ ಸಮಿತಿಯ ಮಾಸ್ಟರ್ ಹಾಗೂ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ಇವರಿಗೆ ಮಾಹಿತಿ ನೀಡಿದ್ದರು. ಬೆಳ್ತಂಗಡಿಯ ಊರ ಪ್ರೇಮಿ ಅಶೋಕ ಇವರಲ್ಲಿಯೂ ಈ ಬಗ್ಗೆ ಚರ್ಚಿಸಿ ಸುರಕ್ಷಿತವಾಗಿ ಸಂರಕ್ಷಿಸುವ ಬಗ್ಗೆ ಮಾಹಿತಿ ಪಡೆದಿದ್ದರು.

ಸರಿಯಾದ ಮಾಹಿತಿ ಪಡೆಯುವ ಉದ್ದೇಶದಿಂದ ಸ್ಥಳಕ್ಕೆ ಧಾವಿಸಿದ ಸ್ನೇಕ್ ಪ್ರಕಾಶ್ ಅವರು ಪುತ್ತೂರಿನ ರವೀಂದ್ರ ನಾಥ್ ಐತಾಳ ಇವರಿಗೆ ಪತ್ತೆಯಾದ ಮೊಟ್ಟೆಯ ಬಗ್ಗೆ ಮಾಹಿತಿ ನೀಡಲಾಯಿತು ಅವರು ಮೊಟ್ಟೆಗಳನ್ನು ಸುರಕ್ಷಿತವಾಗಿ ತಂಪಾದ ಮಣ್ಣಿನ ಅಡಿಯಲ್ಲಿ ಇಡಬೇಕು. ಸುಮಾರು 60-70 ದಿನದಲ್ಲಿ ಮೊಟ್ಟೆಗಳು ಮರಿಯಾಗುತ್ತವೆ. ಬಿಸಿಲು ಸ್ಥಳದಲ್ಲಿ ಇದ್ದಲ್ಲಿ ಮೊಟ್ಟೆಗಳು ಹಾಳಾಗಬಹುದು ಎಂದಿದ್ದರು. ಮತ್ತು ಸುರಕ್ಷಿತವಾಗಿ ಮೊಟ್ಟೆಯನ್ನು ತಂದು ಕೊಟ್ಟಲ್ಲಿ ಮರಿ ಮಾಡಿ ತಾವೇ ಬಿಡುವುದಾಗಿ ತಿಳಿಸಲಾಗಿದೆ. ಇದಕ್ಕೆ ಪೂರಕವಾದ ಸ್ನೇಕ್ ಪ್ರಕಾಶ್ ಇವರು ಮೊಟ್ಟೆಗಳನ್ನು ಪುತ್ತೂರಿಗೆ ಒಯ್ದು ಐತಾಳ ಇವರಿಗೆ ಕೊಟ್ಟು ಬಂದಿರುತ್ತಾರೆ. ಕೋಳಿ ಮೊಟ್ಟೆಯ ಗಾತ್ರಕ್ಕಿಂತ ಚಿಕ್ಕದಾದ ಉದ್ದನೆಯ ಮೊಟ್ಟೆ ಇದಾಗಿದ್ದರೆ , ಉಡದ ಮೊಟ್ಟೆ ಇರಬಹುದು ಎಂದು ಅಂದಾಜಿಸಲಾಗುತ್ತಿದೆ.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ತೆಕ್ಕಾರಿನ ಗುರುಕಿರಣ್ ಆಯ್ಕೆ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya
error: Content is protected !!