24 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜ ಇದರ ಆಶ್ರಯದಲ್ಲಿ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಇದರ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ “ನಂದಗೋಕುಲ ದೀಪೋತ್ಸವ” ಅಂಗವಾಗಿ ಸಾಮೂಹಿಕ ಗೋಪೂಜೆ, ಗೋನಂದಾರತಿ ಮತ್ತು ದೀಪೋತ್ಸವ ಕಾರ್ಯಕ್ರಮ ಡಿ.25ರಂದು ಜರುಗಿತು.

ದೀಪೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.,ಬರೋಡ ತುಳುಕೂಟ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ, ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ, ಅಮೇರಿಕ ವೆಂಚರ್‌ಸಾಫ್ಟ್ ಗ್ಲೋಬಲ್ ಸಂಸ್ಥೆಗಳ
ಸಂಸ್ಥಾಪಕ ವೆಂಕಟ್ರಮಣ ಭಟ್ ಅಗರ್ತ, ಗ್ರಾ.ಪಂ. ಕಳೆಂಜ ಅಧ್ಯಕ್ಷ ಪ್ರಸನ್ನ, ಭಾ.ಜ.ಪ ಮಂಡಲ ಅಧ್ಯಕ್ಷ ಕೆ. ಜಯಂತ್ ಕೋಟ್ಯಾನ್, ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಸೋಮಂತಡ್ಕ ಪಂಚಶ್ರೀ ಉದ್ಯಮಿ ನಾರಾಯಣ ಗೌಡ, ಉದ್ಯಮಿ ಹೆಚ್. ಆರ್. ಪಟೇಲ್ ಉಜಿರೆ, ಡೀಕಯ್ಯ ಗೌಡ ಬಂಡೇರಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ನಂದಗೋಕುಲ ದೀಪೋತ್ಸವದ ಸಮಿತಿ
ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್, ಟ್ರಸ್ಟಿಗಳಾದ ರಾಜೇಶ್ ಪೈ , ರಮೇಶ್ ಪ್ರಭು, ಭಾಸ್ಕರ ಧಮ೯ಸ್ಥಳ ಉಪಸ್ಥಿತರಿದ್ದರು.

ವೈಷ್ಣವಿ, ಇಂದುಮತಿ, ದೀಕ್ಷಿತಾ ಇವರು ಪ್ರಾಥ೯ನೆ ಹಾಡಿದರು. ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ಪೂರಣ್ ವಮ೯ ಸ್ವಾಗತಿಸಿದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗತ೯ ಪ್ರಾಸ್ತಾವಿಕವಾಗಿ ಮಾತನಾಡಿ,‌ ಗೋಶಾಲೆಯ ಉದ್ದೇಶ ತಿಳಿಸಿದರು.
ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಖ್ಯಾತ ದಂತ ವೈದ್ಯರಾದ ಉಜಿರೆಯ ಡಾ| ಎಂ.ಎಂ ದಯಾಕರ್ ವಂದಿಸಿದರು. ಟ್ರಸ್ಟಿ ನವೀನ್ ನೆರಿಯ ಹಾಗೂ ಹರೀಶ್ ನೆರಿಯ ಕಾಯ೯ಕ್ರಮ ನಿರೂಪಿಸಿದರು.

Related posts

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya
error: Content is protected !!