25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜ ಇದರ ಆಶ್ರಯದಲ್ಲಿ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಇದರ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ “ನಂದಗೋಕುಲ ದೀಪೋತ್ಸವ” ಅಂಗವಾಗಿ ಸಾಮೂಹಿಕ ಗೋಪೂಜೆ, ಗೋನಂದಾರತಿ ಮತ್ತು ದೀಪೋತ್ಸವ ಕಾರ್ಯಕ್ರಮ ಡಿ.25ರಂದು ಜರುಗಿತು.

ದೀಪೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.,ಬರೋಡ ತುಳುಕೂಟ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ, ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ, ಅಮೇರಿಕ ವೆಂಚರ್‌ಸಾಫ್ಟ್ ಗ್ಲೋಬಲ್ ಸಂಸ್ಥೆಗಳ
ಸಂಸ್ಥಾಪಕ ವೆಂಕಟ್ರಮಣ ಭಟ್ ಅಗರ್ತ, ಗ್ರಾ.ಪಂ. ಕಳೆಂಜ ಅಧ್ಯಕ್ಷ ಪ್ರಸನ್ನ, ಭಾ.ಜ.ಪ ಮಂಡಲ ಅಧ್ಯಕ್ಷ ಕೆ. ಜಯಂತ್ ಕೋಟ್ಯಾನ್, ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಸೋಮಂತಡ್ಕ ಪಂಚಶ್ರೀ ಉದ್ಯಮಿ ನಾರಾಯಣ ಗೌಡ, ಉದ್ಯಮಿ ಹೆಚ್. ಆರ್. ಪಟೇಲ್ ಉಜಿರೆ, ಡೀಕಯ್ಯ ಗೌಡ ಬಂಡೇರಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ನಂದಗೋಕುಲ ದೀಪೋತ್ಸವದ ಸಮಿತಿ
ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್, ಟ್ರಸ್ಟಿಗಳಾದ ರಾಜೇಶ್ ಪೈ , ರಮೇಶ್ ಪ್ರಭು, ಭಾಸ್ಕರ ಧಮ೯ಸ್ಥಳ ಉಪಸ್ಥಿತರಿದ್ದರು.

ವೈಷ್ಣವಿ, ಇಂದುಮತಿ, ದೀಕ್ಷಿತಾ ಇವರು ಪ್ರಾಥ೯ನೆ ಹಾಡಿದರು. ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ಪೂರಣ್ ವಮ೯ ಸ್ವಾಗತಿಸಿದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗತ೯ ಪ್ರಾಸ್ತಾವಿಕವಾಗಿ ಮಾತನಾಡಿ,‌ ಗೋಶಾಲೆಯ ಉದ್ದೇಶ ತಿಳಿಸಿದರು.
ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಖ್ಯಾತ ದಂತ ವೈದ್ಯರಾದ ಉಜಿರೆಯ ಡಾ| ಎಂ.ಎಂ ದಯಾಕರ್ ವಂದಿಸಿದರು. ಟ್ರಸ್ಟಿ ನವೀನ್ ನೆರಿಯ ಹಾಗೂ ಹರೀಶ್ ನೆರಿಯ ಕಾಯ೯ಕ್ರಮ ನಿರೂಪಿಸಿದರು.

Related posts

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya
error: Content is protected !!