April 2, 2025
ಅಪರಾಧ ಸುದ್ದಿ

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.
ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.‌ಈ ವೇಳೆ ರಸ್ತೆಗೆಸೆಯಲ್ಪಟ್ಟು ಸವಾರ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಅಣ್ಣಿ ಪೂಜಾರಿಯ ಪುತ್ರ ವೃತ್ತಿಯಲ್ಲಿ ಫೈಂಟರ್ ಕೆಲಸ ಮಾಡುತ್ತಿದ್ದ ಪುರುಷೋತ್ತಮ ಪೂಜಾರಿ(20) ಸಾವನ್ನಪ್ಪಿದವನು ಎಂದು ಗುರುತಿಸಲಾಗಿದೆ. ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!