September 6, 2026
ಅಪರಾಧ ಸುದ್ದಿ

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.
ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.‌ಈ ವೇಳೆ ರಸ್ತೆಗೆಸೆಯಲ್ಪಟ್ಟು ಸವಾರ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಅಣ್ಣಿ ಪೂಜಾರಿಯ ಪುತ್ರ ವೃತ್ತಿಯಲ್ಲಿ ಫೈಂಟರ್ ಕೆಲಸ ಮಾಡುತ್ತಿದ್ದ ಪುರುಷೋತ್ತಮ ಪೂಜಾರಿ(20) ಸಾವನ್ನಪ್ಪಿದವನು ಎಂದು ಗುರುತಿಸಲಾಗಿದೆ. ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya
error: Content is protected !!