25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.
ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.‌ಈ ವೇಳೆ ರಸ್ತೆಗೆಸೆಯಲ್ಪಟ್ಟು ಸವಾರ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಅಣ್ಣಿ ಪೂಜಾರಿಯ ಪುತ್ರ ವೃತ್ತಿಯಲ್ಲಿ ಫೈಂಟರ್ ಕೆಲಸ ಮಾಡುತ್ತಿದ್ದ ಪುರುಷೋತ್ತಮ ಪೂಜಾರಿ(20) ಸಾವನ್ನಪ್ಪಿದವನು ಎಂದು ಗುರುತಿಸಲಾಗಿದೆ. ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

Suddi Udaya
error: Content is protected !!