24 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜ ಇದರ ಆಶ್ರಯದಲ್ಲಿ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಇದರ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ “ನಂದಗೋಕುಲ ದೀಪೋತ್ಸವ” ಅಂಗವಾಗಿ ಸಾಮೂಹಿಕ ಗೋಪೂಜೆ, ಗೋನಂದಾರತಿ ಮತ್ತು ದೀಪೋತ್ಸವ ಕಾರ್ಯಕ್ರಮ ಡಿ.25ರಂದು ಜರುಗಿತು.

ದೀಪೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.,ಬರೋಡ ತುಳುಕೂಟ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ, ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ, ಅಮೇರಿಕ ವೆಂಚರ್‌ಸಾಫ್ಟ್ ಗ್ಲೋಬಲ್ ಸಂಸ್ಥೆಗಳ
ಸಂಸ್ಥಾಪಕ ವೆಂಕಟ್ರಮಣ ಭಟ್ ಅಗರ್ತ, ಗ್ರಾ.ಪಂ. ಕಳೆಂಜ ಅಧ್ಯಕ್ಷ ಪ್ರಸನ್ನ, ಭಾ.ಜ.ಪ ಮಂಡಲ ಅಧ್ಯಕ್ಷ ಕೆ. ಜಯಂತ್ ಕೋಟ್ಯಾನ್, ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಸೋಮಂತಡ್ಕ ಪಂಚಶ್ರೀ ಉದ್ಯಮಿ ನಾರಾಯಣ ಗೌಡ, ಉದ್ಯಮಿ ಹೆಚ್. ಆರ್. ಪಟೇಲ್ ಉಜಿರೆ, ಡೀಕಯ್ಯ ಗೌಡ ಬಂಡೇರಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ನಂದಗೋಕುಲ ದೀಪೋತ್ಸವದ ಸಮಿತಿ
ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್, ಟ್ರಸ್ಟಿಗಳಾದ ರಾಜೇಶ್ ಪೈ , ರಮೇಶ್ ಪ್ರಭು, ಭಾಸ್ಕರ ಧಮ೯ಸ್ಥಳ ಉಪಸ್ಥಿತರಿದ್ದರು.

ವೈಷ್ಣವಿ, ಇಂದುಮತಿ, ದೀಕ್ಷಿತಾ ಇವರು ಪ್ರಾಥ೯ನೆ ಹಾಡಿದರು. ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ಪೂರಣ್ ವಮ೯ ಸ್ವಾಗತಿಸಿದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗತ೯ ಪ್ರಾಸ್ತಾವಿಕವಾಗಿ ಮಾತನಾಡಿ,‌ ಗೋಶಾಲೆಯ ಉದ್ದೇಶ ತಿಳಿಸಿದರು.
ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಖ್ಯಾತ ದಂತ ವೈದ್ಯರಾದ ಉಜಿರೆಯ ಡಾ| ಎಂ.ಎಂ ದಯಾಕರ್ ವಂದಿಸಿದರು. ಟ್ರಸ್ಟಿ ನವೀನ್ ನೆರಿಯ ಹಾಗೂ ಹರೀಶ್ ನೆರಿಯ ಕಾಯ೯ಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!