September 6, 2026
ತಾಲೂಕು ಸುದ್ದಿ

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜ ಇದರ ಆಶ್ರಯದಲ್ಲಿ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಇದರ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ “ನಂದಗೋಕುಲ ದೀಪೋತ್ಸವ” ಅಂಗವಾಗಿ ಸಾಮೂಹಿಕ ಗೋಪೂಜೆ, ಗೋನಂದಾರತಿ ಮತ್ತು ದೀಪೋತ್ಸವ ಕಾರ್ಯಕ್ರಮ ಡಿ.25ರಂದು ಜರುಗಿತು.

ದೀಪೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.,ಬರೋಡ ತುಳುಕೂಟ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ, ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ, ಅಮೇರಿಕ ವೆಂಚರ್‌ಸಾಫ್ಟ್ ಗ್ಲೋಬಲ್ ಸಂಸ್ಥೆಗಳ
ಸಂಸ್ಥಾಪಕ ವೆಂಕಟ್ರಮಣ ಭಟ್ ಅಗರ್ತ, ಗ್ರಾ.ಪಂ. ಕಳೆಂಜ ಅಧ್ಯಕ್ಷ ಪ್ರಸನ್ನ, ಭಾ.ಜ.ಪ ಮಂಡಲ ಅಧ್ಯಕ್ಷ ಕೆ. ಜಯಂತ್ ಕೋಟ್ಯಾನ್, ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಸೋಮಂತಡ್ಕ ಪಂಚಶ್ರೀ ಉದ್ಯಮಿ ನಾರಾಯಣ ಗೌಡ, ಉದ್ಯಮಿ ಹೆಚ್. ಆರ್. ಪಟೇಲ್ ಉಜಿರೆ, ಡೀಕಯ್ಯ ಗೌಡ ಬಂಡೇರಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ನಂದಗೋಕುಲ ದೀಪೋತ್ಸವದ ಸಮಿತಿ
ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್, ಟ್ರಸ್ಟಿಗಳಾದ ರಾಜೇಶ್ ಪೈ , ರಮೇಶ್ ಪ್ರಭು, ಭಾಸ್ಕರ ಧಮ೯ಸ್ಥಳ ಉಪಸ್ಥಿತರಿದ್ದರು.

ವೈಷ್ಣವಿ, ಇಂದುಮತಿ, ದೀಕ್ಷಿತಾ ಇವರು ಪ್ರಾಥ೯ನೆ ಹಾಡಿದರು. ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ಪೂರಣ್ ವಮ೯ ಸ್ವಾಗತಿಸಿದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗತ೯ ಪ್ರಾಸ್ತಾವಿಕವಾಗಿ ಮಾತನಾಡಿ,‌ ಗೋಶಾಲೆಯ ಉದ್ದೇಶ ತಿಳಿಸಿದರು.
ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಖ್ಯಾತ ದಂತ ವೈದ್ಯರಾದ ಉಜಿರೆಯ ಡಾ| ಎಂ.ಎಂ ದಯಾಕರ್ ವಂದಿಸಿದರು. ಟ್ರಸ್ಟಿ ನವೀನ್ ನೆರಿಯ ಹಾಗೂ ಹರೀಶ್ ನೆರಿಯ ಕಾಯ೯ಕ್ರಮ ನಿರೂಪಿಸಿದರು.

Related posts

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya
error: Content is protected !!