September 6, 2026
ಅಪರಾಧ ಸುದ್ದಿ

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ನೀರು ಪಾಲಾದ ಯುವಕ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ ಪುತ್ರ ಜನಾರ್ಧನ ಗೌಡ (42) ಎಂದು

ತಿಳಿದುಬಂದಿದೆ. ಜನಾರ್ಧನ ಹಾಗೂ ಬೋಲೋಡಿ ನಿವಾಸಿ ಮಹೇಶ್ ಎಂಬವರು ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಈ ವೇಳೆ ಜನಾರ್ಧನ ಅವರು ನೀರು ಪಾಲಾಗಿದ್ದಾರೆ . ಆದರೆ ಜೊತೆಗಿದ್ದ ಈತನ ಸ್ನೇಹಿತ ಮಹೇಶ್ ಅಲ್ಲಿಂದ ಪರಾರಿಯಾಗಿದ್ದ ಎನ್ನಲಾಗಿದೆ. ನೀರಿಗೆ ಬಿದ್ದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಯುವಕನ ಕೈ ಕಾಲುಗಳು ಗಾಯಗಳಾಗಿದ್ದು, ಸಾವಿನ ಸುತ್ತ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಪೊಲೀಸರಿಂದ ಲಭ್ಯವಾಗಬೇಕಾಗಿದೆ.

Related posts

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಶೇಖರಿಸಿಟ್ಟಿದ್ದ ರೂ.29 ಸಾವಿರ ಮದ್ಯ ವಶಕ್ಕೆ : ಆರೋಪಿ ಬಂಧನ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ

Suddi Udaya
error: Content is protected !!