24.4 C
ಪುತ್ತೂರು, ಬೆಳ್ತಂಗಡಿ
June 8, 2025
ಅಪರಾಧ ಸುದ್ದಿ

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ನೀರು ಪಾಲಾದ ಯುವಕ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ ಪುತ್ರ ಜನಾರ್ಧನ ಗೌಡ (42) ಎಂದು

ತಿಳಿದುಬಂದಿದೆ. ಜನಾರ್ಧನ ಹಾಗೂ ಬೋಲೋಡಿ ನಿವಾಸಿ ಮಹೇಶ್ ಎಂಬವರು ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಈ ವೇಳೆ ಜನಾರ್ಧನ ಅವರು ನೀರು ಪಾಲಾಗಿದ್ದಾರೆ . ಆದರೆ ಜೊತೆಗಿದ್ದ ಈತನ ಸ್ನೇಹಿತ ಮಹೇಶ್ ಅಲ್ಲಿಂದ ಪರಾರಿಯಾಗಿದ್ದ ಎನ್ನಲಾಗಿದೆ. ನೀರಿಗೆ ಬಿದ್ದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಯುವಕನ ಕೈ ಕಾಲುಗಳು ಗಾಯಗಳಾಗಿದ್ದು, ಸಾವಿನ ಸುತ್ತ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಪೊಲೀಸರಿಂದ ಲಭ್ಯವಾಗಬೇಕಾಗಿದೆ.

Related posts

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya
error: Content is protected !!