30.9 C
ಪುತ್ತೂರು, ಬೆಳ್ತಂಗಡಿ
April 5, 2025
ಅಪರಾಧ ಸುದ್ದಿ

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ನೀರು ಪಾಲಾದ ಯುವಕ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ ಪುತ್ರ ಜನಾರ್ಧನ ಗೌಡ (42) ಎಂದು

ತಿಳಿದುಬಂದಿದೆ. ಜನಾರ್ಧನ ಹಾಗೂ ಬೋಲೋಡಿ ನಿವಾಸಿ ಮಹೇಶ್ ಎಂಬವರು ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಈ ವೇಳೆ ಜನಾರ್ಧನ ಅವರು ನೀರು ಪಾಲಾಗಿದ್ದಾರೆ . ಆದರೆ ಜೊತೆಗಿದ್ದ ಈತನ ಸ್ನೇಹಿತ ಮಹೇಶ್ ಅಲ್ಲಿಂದ ಪರಾರಿಯಾಗಿದ್ದ ಎನ್ನಲಾಗಿದೆ. ನೀರಿಗೆ ಬಿದ್ದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಯುವಕನ ಕೈ ಕಾಲುಗಳು ಗಾಯಗಳಾಗಿದ್ದು, ಸಾವಿನ ಸುತ್ತ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಪೊಲೀಸರಿಂದ ಲಭ್ಯವಾಗಬೇಕಾಗಿದೆ.

Related posts

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ