22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ನೀರು ಪಾಲಾದ ಯುವಕ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ ಪುತ್ರ ಜನಾರ್ಧನ ಗೌಡ (42) ಎಂದು

ತಿಳಿದುಬಂದಿದೆ. ಜನಾರ್ಧನ ಹಾಗೂ ಬೋಲೋಡಿ ನಿವಾಸಿ ಮಹೇಶ್ ಎಂಬವರು ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಈ ವೇಳೆ ಜನಾರ್ಧನ ಅವರು ನೀರು ಪಾಲಾಗಿದ್ದಾರೆ . ಆದರೆ ಜೊತೆಗಿದ್ದ ಈತನ ಸ್ನೇಹಿತ ಮಹೇಶ್ ಅಲ್ಲಿಂದ ಪರಾರಿಯಾಗಿದ್ದ ಎನ್ನಲಾಗಿದೆ. ನೀರಿಗೆ ಬಿದ್ದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಯುವಕನ ಕೈ ಕಾಲುಗಳು ಗಾಯಗಳಾಗಿದ್ದು, ಸಾವಿನ ಸುತ್ತ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಪೊಲೀಸರಿಂದ ಲಭ್ಯವಾಗಬೇಕಾಗಿದೆ.

Related posts

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಆರೋಪ:ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು-ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya
error: Content is protected !!