22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ನೀರು ಪಾಲಾದ ಯುವಕ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ ಪುತ್ರ ಜನಾರ್ಧನ ಗೌಡ (42) ಎಂದು

ತಿಳಿದುಬಂದಿದೆ. ಜನಾರ್ಧನ ಹಾಗೂ ಬೋಲೋಡಿ ನಿವಾಸಿ ಮಹೇಶ್ ಎಂಬವರು ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಈ ವೇಳೆ ಜನಾರ್ಧನ ಅವರು ನೀರು ಪಾಲಾಗಿದ್ದಾರೆ . ಆದರೆ ಜೊತೆಗಿದ್ದ ಈತನ ಸ್ನೇಹಿತ ಮಹೇಶ್ ಅಲ್ಲಿಂದ ಪರಾರಿಯಾಗಿದ್ದ ಎನ್ನಲಾಗಿದೆ. ನೀರಿಗೆ ಬಿದ್ದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಯುವಕನ ಕೈ ಕಾಲುಗಳು ಗಾಯಗಳಾಗಿದ್ದು, ಸಾವಿನ ಸುತ್ತ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಪೊಲೀಸರಿಂದ ಲಭ್ಯವಾಗಬೇಕಾಗಿದೆ.

Related posts

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya
error: Content is protected !!