24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ನೀರು ಪಾಲಾದ ಯುವಕ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ ಪುತ್ರ ಜನಾರ್ಧನ ಗೌಡ (42) ಎಂದು

ತಿಳಿದುಬಂದಿದೆ. ಜನಾರ್ಧನ ಹಾಗೂ ಬೋಲೋಡಿ ನಿವಾಸಿ ಮಹೇಶ್ ಎಂಬವರು ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಈ ವೇಳೆ ಜನಾರ್ಧನ ಅವರು ನೀರು ಪಾಲಾಗಿದ್ದಾರೆ . ಆದರೆ ಜೊತೆಗಿದ್ದ ಈತನ ಸ್ನೇಹಿತ ಮಹೇಶ್ ಅಲ್ಲಿಂದ ಪರಾರಿಯಾಗಿದ್ದ ಎನ್ನಲಾಗಿದೆ. ನೀರಿಗೆ ಬಿದ್ದ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಯುವಕನ ಕೈ ಕಾಲುಗಳು ಗಾಯಗಳಾಗಿದ್ದು, ಸಾವಿನ ಸುತ್ತ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಪೊಲೀಸರಿಂದ ಲಭ್ಯವಾಗಬೇಕಾಗಿದೆ.

Related posts

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
error: Content is protected !!