September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

ಬೆಳ್ತಂಗಡಿ: ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆಯ ಆರೋಪಿಗಳಿಗೆ ರಾಜಕೀಯ ರಕ್ಷಣೆ, ಆರೋಪಿಗಳನ್ನು ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ರಷ ಸಮಿತಿ(ರಿ) ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ, ಮೊಗೇರ ಸಂಘ ಸಮನ್ವಯ ಸಮಿತಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸಂಘ(ರಿ) ಇದರ ವತಿಯಿಂದ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಡಿ.29ರಂದು ಪತ್ರಿಕಾಗೋಷ್ಠಿ ಜರುಗಿತು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘಷ೯ ಸಮನ್ವಯ ಸಮಿತಿ ಜಿಲ್ಲಾ ಕಾಯ೯ದಶಿ೯ ಅಶೋಕ್ ಕೊಂಚಾಡಿ ಮಾತನಾಡಿ,
ಶಿಬಾಜೆ ಗ್ರಾಮದ ಕುರುಂಜ ಎಂಬಲ್ಲಿ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಾರೋಪಿಗಳ ಮೇಲೆ, ದರೋಡೆ, ಹಲ್ಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ. ಪ್ರಕರಣವನ್ನು ಖಂಡಿಸಿರುವ ಮೊಗೇರ ಸಂಘ ಮತ್ತು ದಲಿತ ಸಂಘಟನೆಗಳ ಸಮನ್ವಯ ಸಮಿತಿಯು ಆರೋಪಿಗಳನ್ನು ತಕ್ಷಣ ಬಂಧಿಸಿ ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಸರಕಾರವು ತಕ್ಷಣ ಪ್ರಕರಣವನ್ನು ವಿಶೇಷ ನೆಲೆಯಲ್ಲಿ ಕೈಗೆತ್ತಿಕೊಳ್ಳಬೇಕು. ತನಿಖಾಧಿಕಾರಿಯನ್ನು ಬದಲಾಯಿಸಿ ಉನ್ನತಮಟ್ಟದಲ್ಲಿ ಸಿಓಡಿ ತನಿಖೆ ನಡೆಸಬೇಕು. ಹಾಗೂ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯ ವಿರುದ್ಧ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸುವುದಾಗಿ
ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದ.ಸಂ.ಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರಧಾನ ಸಂಚಾಲಕರು ನೇಮಿರಾಜ್ ಕೆ, ಮೊಗೇರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿ ಮಾತನಾಡಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದರು.
ಮೊಗೇರ ಸಮನ್ವಯ ಸಮಿತಿ ಅಧ್ಯಕ್ಷ ಕೊರಗಪ್ಪ ಅಳದಂಗಡಿ , ಕಾರ್ಯದರ್ಶಿ ಜಗದೀಶ್ ಕಕ್ಕಿಂಜೆ, ಜಿಲ್ಲಾ ಸಮಿತಿ ಸದಸ್ಯ ವೆಂಕಣ್ಣ ಕೊಯ್ಯೂರು ಉಪಸ್ಥಿತರಿದ್ದರು.

Related posts

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya
error: Content is protected !!