ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ

Suddi Udaya

ಬೆಳ್ತಂಗಡಿ : ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ತಿರುವಿನಲ್ಲಿ ಅಪಘಾತ ನಡೆದಿದ್ದು ಬೈಕ್ ಸವಾರ ಧರ್ಮಸ್ಥಳ ನಿವಾಸಿ ನಿತೇಶ್(28) ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಟಯರ್ ಬೈಕಿನಿಂದ ಕಳಚಿ ಬಿದ್ದಿದೆ. ಕಾರಿನ ಏರ್ ಬ್ಯಾಗ್ ಓಪನ್ ಅಗಿರುವ ಕಾರಣ ಕಾರಿನಲ್ಲಿದ್ದವರಿಗೆ ದೊಡ್ಡ ಗಾಯವಾಗಿಲ್ಲ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

error: Content is protected !!