July 23, 2026
ತಾಲೂಕು ಸುದ್ದಿ

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

ಬೆಳ್ತಂಗಡಿ: ‘ಭ್ರಷ್ಟಾಚಾರ ಅಳಿಸಿ, ನೇತ್ರಾವತಿ ಉಳಿಸಿ’ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು. ಅವರು ಜ .2 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಹಾಗೂ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಜ .7 ರಂದು ಬೃಹತ್ ಪ್ರತಿಭಟನೆಯನ್ನು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನೇತ್ರಾವತಿ ಉಳಿಸಿ ಭ್ರಷ್ಟಾಚಾರ ನಿಲ್ಲಿಸಿ ಹಾಗೂ ವಿವಿಧ ವಿಚಾರಗಳ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ಮುಂಡಾಜೆಯಿಂದ ಉಪ್ಪಿನಂಗಡಿಯವರೆಗೆ ಹಾಗೂ ಬೆಳ್ತಂಗಡಿಯಲ್ಲಿ ಹಕ್ಕೊತ್ತಾಯ ಸಭೆಯು ನಡೆಯಲಿದ್ದು,
ಈ ಸಭೆಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆಯೇ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಾಗಲಿ ನನಗಾಗಲಿ ಯಾವುದೇ ಮಾಹಿತಿ ಇಲ್ಲ ಜ 07 ರಂದು ನಡೆಯುವ ಪ್ರತಿಭಟನೆ ಪಕ್ಷದ ಅಧಿಕೃತ ಕಾರ್ಯಕ್ರಮವಾಗಿದ್ದು ಜ 08 ರಂದು ನಡೆಯುವ ಜಾಥ ಅವರ ವೈಯಕ್ತಿಕ ಕಾರ್ಯಕ್ರಮವಾಗಿದೆ ಅದ್ದರಿಂದ ಅದಕ್ಕೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಗಂಗಾಧರ್ ಗೌಡ, ಶೈಲೇಶ್ ಕುಮಾರ್, ರಂಜನ್ ಗೌಡ, ಎ.ಸಿ ಮ್ಯಾಥ್ಯೂ, ಜಗದೀಶ್ ಡಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya
error: Content is protected !!