July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

ಬೆಂಗಳೂರು ಡಿ29: ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರ ಸೂಚನೆಯ ಮೇರೆಗೆ ಜನವರಿ 31,ರ ವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯದಿಂದ ಪ್ರಪ್ರಥಮ ಬಾರಿಗೆ ಚಾರ್‌ಧಾಮ್‌ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರದಂತೆ ಹಾಗೂ ಕೈಲಾಶ ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರದಂತೆ ಸರಕಾರದ ಸಹಾಯಧನವನ್ನ ನೀಡಲಾಗುತ್ತದೆ. ಇದಕ್ಕೆ ಡಿಸೆಂಬರ್‌ 1 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಈ ಬಾರಿ ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ಸಂಧರ್ಭದಲ್ಲಿ ಜನಸಂಧಣಿ ಹೆಚ್ಚಾಗಿದ್ದರಿಂದ ಹಾಗೂ ತಾಂತ್ರಿಕ ಕಾರಣಗಳಿಂದ ಯಾತ್ರಾರ್ಥಿಗಳು ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗಿರಲಿಲ್ಲ. ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳನ್ನ ಪಡೆದುಕೊಳ್ಳುವುದಕ್ಕೆ ಅವಕಾಶ ನೀಡುವಂತೆ ಬೆಳಗಾವಿಯ ಅಧಿವೇಶನದಲ್ಲಿ ಹಲವಾರು ಶಾಸಕರು ಮಾನ್ಯ ಸಚಿವರಿಗೆ ಮನವಿ ಮಾಡಿದ್ದರು. ಹೆಚ್ಚಿನ ಜನರು ಅರ್ಜಿ ಸಲ್ಲಿಸಲಿ ಎನ್ನುವ ಉದ್ದೇಶದಿಂದ, ಹಾಗೂ ಅಗತ್ಯ ದಾಖಲೆಗಳನ್ನ ಕ್ರೋಢೀಕರಿಸಲು ಅವಕಾಶ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರ ಸೂಚನೆಯಂತೆ. ಈಗ ಅರ್ಜಿ ಸಲ್ಲಿಕೆಗೆ ಇದ್ದಂತಹ ಸಮಸ್ಯೆಗಳನ್ನು ನಿವಾರಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕವನ್ನ ಒಂದು ತಿಂಗಳುಗಳ ಕಾಲ (ಜನವರಿ 31) ವಿಸ್ತರಿಸಲಾಗಿದೆ.

—————————————————————————

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಗೆ ತೆರಳಿರುವ ಯಾತ್ರಾರ್ಥಿಗಳಿಗೆ ಸಹಾಯಧನ ನೀಡುವುದು ನಮ್ಮ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಹೆಚ್ಚಿನ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲು ಅವಕಾಶ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 31,2023 ರ ತನಕ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದ್ದೇವೆ.

ಶ್ರೀಮತಿ ಶಶಿಕಲಾ ಜೊಲ್ಲೆ

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya

ಬೆಳ್ತಂಗಡಿ ಪ್ರಾ.ಸ.ಕೃಷಿ ಮತ್ತು ಗ್ರಾ. ಅಭಿವೃದ್ಧಿ ಬ್ಯಾಂಕ್ ನ ವ್ಯವಸ್ಥಾಪಕರಾದ ಕೆ. ಗಿರಿಧರರಿಗೆ ಬೀಳ್ಕೊಡುಗೆ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya
error: Content is protected !!