September 6, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ


ಬೆಂಗಳೂರು: ಜನವರಿ 03: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿ ಯನ್ನೇ ಬಿಟ್ಟುಹೋಗಿದ್ದಾರೆ
ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯ ಮಂತ್ರಿಗಳು ತಿಳಿಸಿದರು.

Related posts

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya
error: Content is protected !!