July 23, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿ

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

ಮಂಗಳೂರು: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಲಾಲ್ ಭಾಗ್ ನ ಕರಾವಳಿ ಮೈದಾನ ಪರಿಸರದಲ್ಲಿ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್-ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ. ನೇತ್ರತ್ವದ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಪಡ್ಯಾರು ನಿವಾಸಿ ನಿಮಿತ್(26ವ) ಮತ್ತು ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಯೋಗೀಶ್ ಪೂಜಾರಿ (41ವ) ಎಂದು ಗುರುತಿಸಲಾಗಿದೆ.

ಬಂದಿತರಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ ಸುಮಾರು 3.2 ಕೋಟಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಸಿ.ಸಿ.ಬಿ. ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ., ಪಿಎಸ್‌ಐ ರಾಜೇಂದ್ರ ಬಿ, ಸುದೀಪ್ ಎಂ.ವಿ. ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya
error: Content is protected !!