23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

ಬೆಳ್ತಂಗಡಿ : ಟಿ. ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭವತಿಯಾಗಿರುವುದನ್ನು ತಿಳಿದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ಬಿಲ್ಲವ ಸಂಘಟನೆಯವರು ಜ.9
ರಂದು ಬೆಳ್ತಂಗಡಿ ಠಾಣೆಗೆ ಮನವಿ ನೀಡಿ, ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಎಲ್ದಡ್ಕ, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್, ಉಪಾಧ್ಯಕ್ಷ ಶೇಖರ ಬಂಗೇರ, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್, ನಿರ್ದೇಶಕರುಗಳಾದ ದಿನೇಶ್ ಕೋಟ್ಯಾನ್, ಯಶೋಧರ, ಗೋಪಾಲ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಕಾರ್ಯದರ್ಶಿ ಶಂಭಾವಿ ಬಂಗೇರ, ಮಾಜಿ ಅಧ್ಯಕ್ಷೆ ರಾಜಶ್ರೀ ರಮಣ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್., ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ ಮಾಜಿ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಕೇಂದ್ರ ಸಮಿತಿ ನಿರ್ದೇಶಕ ಎಂ. ಕೆ. ಪ್ರಸಾದ್, ಕಾನೂನು ಸಲಹೆಗಾರ ಮನೋಹರ್ ಇಳಂತಿಲ, ಪ್ರಶಾಂತ್ ಮಚ್ಚಿನ, ರಮಾನಂದ ಮುಂಡೂರು, ಶಾಂತ ಬಂಗೇರ, ಗುರುರಾಜ್ ಗುರಿಪಳ್ಳ ಸುರೇಂದ್ರ ಬಂಗಾಡಿ ಮೊದಲದವರು ಉಪಸ್ಥಿತರಿದ್ದರು

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya
error: Content is protected !!