September 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

ಬೆಳ್ತಂಗಡಿ : ಟಿ. ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭವತಿಯಾಗಿರುವುದನ್ನು ತಿಳಿದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ಬಿಲ್ಲವ ಸಂಘಟನೆಯವರು ಜ.9
ರಂದು ಬೆಳ್ತಂಗಡಿ ಠಾಣೆಗೆ ಮನವಿ ನೀಡಿ, ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಎಲ್ದಡ್ಕ, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್, ಉಪಾಧ್ಯಕ್ಷ ಶೇಖರ ಬಂಗೇರ, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್, ನಿರ್ದೇಶಕರುಗಳಾದ ದಿನೇಶ್ ಕೋಟ್ಯಾನ್, ಯಶೋಧರ, ಗೋಪಾಲ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಕಾರ್ಯದರ್ಶಿ ಶಂಭಾವಿ ಬಂಗೇರ, ಮಾಜಿ ಅಧ್ಯಕ್ಷೆ ರಾಜಶ್ರೀ ರಮಣ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್., ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ ಮಾಜಿ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಕೇಂದ್ರ ಸಮಿತಿ ನಿರ್ದೇಶಕ ಎಂ. ಕೆ. ಪ್ರಸಾದ್, ಕಾನೂನು ಸಲಹೆಗಾರ ಮನೋಹರ್ ಇಳಂತಿಲ, ಪ್ರಶಾಂತ್ ಮಚ್ಚಿನ, ರಮಾನಂದ ಮುಂಡೂರು, ಶಾಂತ ಬಂಗೇರ, ಗುರುರಾಜ್ ಗುರಿಪಳ್ಳ ಸುರೇಂದ್ರ ಬಂಗಾಡಿ ಮೊದಲದವರು ಉಪಸ್ಥಿತರಿದ್ದರು

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya
error: Content is protected !!