September 6, 2026
ಶಾಲಾ ಕಾಲೇಜು

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜು ನಡ ಸಹಯೋಗದಿಂದ
ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ನರೇಂದ್ರ ನಮನ ಕಾರ್ಯಕ್ರಮ ಜ.12ರಂದು‌ನಡ ಸ.ಪ.ಪೂ.ಕಾಲೇಜು ನಡ ಇಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಜೇಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಜೆಸಿ ಶಂಕರ್ ರಾವ್ ವಹಿಸಿದರು.ಈ ಸಂದರ್ಭದಲ್ಲಿ ನಡ.ಸ.ಪ.ಪೂ ಕಾಲೇಜು ಪ್ರಾಂಶುಪಾಲರಾದ ಚಂದ್ರಶೇಖರ್..ಜೇಸಿಐ ಬೆಳ್ತಂಗಡಿ ಮಂಜುಶ್ರೀ ನಿಕಟಪೂರ್ವ ಅಧ್ಯಕ್ಷ ಪ್ರಸಾದ್.ಪೂರ್ವಧ್ಯಕ್ಷ ಚಿದಾನoದ ಇಡ್ಯಾ ಕಾರ್ಯಕ್ರಮ ಸಂಯೋಜಕಿ ಆಶಾಲತಾ.
ಕಾರ್ಯದರ್ಶಿ ಸುಧೀರ್ ಕೆ.ಎನ್ ಉಪಸ್ಥಿತಿದಿದ್ದರು. ಯುವ ಪೀಳಿಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು, ಆದರ್ಶ ಪ್ರಯಾರಾಗಿ ಬದುಕು ಕಟ್ಟಿಕೊಳ್ಳ ಬೇಕು, ವಿವೇಕಯುಕ್ತ ಮಾತುಗಳನ್ನು ಜೀವನದಲ್ಲಿ ಆಡಬೇಕು ಎಂದು ದಿಕ್ಸೂಚಿ ಭಾಷಣದಲ್ಲಿ ಪ್ರಥ್ವಿಶ್ ಧರ್ಮಸ್ಥಳ ವಿದ್ಯಾರ್ಥಿಗಳನ್ನು ಪ್ರೆರೇಪಿಸಿದರು.

ನರೇಂದ್ರ ನಮನ ಕಾರ್ಯಕ್ರಮದ ವೇದಿಕೆಯಲ್ಲಿ ಆದರ್ಶ ಯುವ ನಾಯಕ ಪ್ರಶಸ್ತಿಯನ್ನು ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡರಿಗೆ ನೀಡಿ ಸನ್ಮಾನಿಸಲಾಯಿತು.

ಇದೆ ಸಂದರ್ಭದಲ್ಲಿ ರಸಪ್ರಶ್ನೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿಜೇತರ ಪಟ್ಟಿಯನ್ನು ಕ್ವಿಜ್ ಮಾಸ್ಟರ್ ಜೆಸಿ ಹೇಮಾವತಿ ವಾಚಿಸಿದರು.

ಜೆಸಿ ಚಂದ್ರಹಾಸ ಬಳಂಜ ವೇದಿಕೆಗೆ ಅತಿಥಿಗಳನ್ನು ಬರಮಾಡಿಕೊಂಡರು . ಜೆಸಿ ರಜತ್ ಜೆಸಿ ವಾಣಿ ವಾಚಿಸಿದರು, ಸ.ಪ.ಪೂ ಕಾಲೇಜು ರೆಡ್ ಕ್ರಾಸ್ ಘಟಕದ ನಿರ್ದೇಶಕರಾದ ಮೋಹನ್ ಗೌಡ ಧನ್ಯವಾದವಿತ್ತರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗ ವಿದ್ಯಾರ್ಥಿಗಳು, ಜೆಸಿ ಪೂರ್ವಧ್ಯಕ್ಷರಾದ ಜೆಸಿ ಶ್ರೀನಾಥ್ ಕೆ. ಎಮ್, ಜೆಸಿ ತುಕಾರಾಮ್, ಜೆಸಿ ಸ್ವರೂಪ್ ಶೇಖರ್, ಮಹಿಳಾ ಜೆಸಿ ಪೂರ್ವಧ್ಯಕ್ಷೆ ಜೆಸಿ ಮಮತಾ ಶ್ರೀನಾಥ್, ಸದಸ್ಯರಾದ ಶೈಲೇಶ್ ಉಪಸ್ಥಿತರಿದ್ದರು.

Related posts

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!