April 7, 2025
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ