July 23, 2026
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

Suddi Udaya
error: Content is protected !!