25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಮುಂಡಾಜೆ:ಇಲ್ಲಿನ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನೋತ್ಸವವನ್ನು ʼರಾಷ್ಟ್ರೀಯ ಯುವ ದಿನʼವನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಾ.ಸುಬ್ರಹ್ಮಣ್ಯ ಕೆ. ಮಾತನಾಡಿ,” ಸ್ವಾಮಿ ವಿವೇಕಾನಂದರು ಭಾರತದ ಸಂಸೃತಿ, ಜ್ಞಾನ, ಆಧ್ಯಾತ್ಮಿಕತೆ ಮತ್ತು ಸಹೋದರತೆಯನ್ನು ಜಗತ್ತಿಗೆ ಸಾರಿದವರು. ಇಂದಿನ ಯುವ ಜನತೆ ವಿವೇಕಾನಂದರ ಆದರ್ಶಗಳನ್ನು ಸಂಕಲ್ಪ ಮಾಡಿ ಅನುಷ್ಟಾನಕ್ಕೆ ತರಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಸ್ಥಾನೀಯ ಸಮಿತಿ ಅಧ್ಯಕ್ಷ ವಿನಯಚಂದ್ರ ವಹಿಸಿದ್ದರು. ಪ್ರಿನ್ಸಿಪಾಲ್ ಜಾಲಿ ಡಿ’ಸೋಜ ಉಪಸ್ಥಿತರಿದ್ದರು. ಇಂಗ್ಲಿಷ್‌ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ಮನಃಶಾಸ್ತ್ರ ಉಪನ್ಯಾಸಕಿ ನಮಿತಾ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ಉಪನ್ಯಾಸಕಿ ಗೀತಾ ಗೋಪಾಲ್ ವಂದಿಸಿದರು.

Related posts

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya
error: Content is protected !!