25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!