22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಿಗೆ ಶುಭ ಕೋರಿದ ಅಬ್ದುಲ್ ರಹಿಮಾನ್ ಪಡ್ಪು

Suddi Udaya
error: Content is protected !!