September 6, 2026
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!