31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

ಉಜಿರೆ:ಇಲ್ಲಿನ ರಾಮಕೃಷ್ಣ ಸಭಾಭವನದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೆ ಪ್ರಯುಕ್ತ ಪೇಟೆ ಸವಾರಿ,ಯಕ್ಷಗಾನ ಹಾಗೂ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶದ ಆಮಂತ್ರಣ, ಹೊರೆ ಕಾಣಿಕೆ ಇತ್ಯಾದಿ ವ್ಯವಸ್ಥೆಗಳ ಕುರಿತು ಪೂರ್ವಭಾವಿ ಸಭೆ ಜರುಗಿತು.


ಶ್ರೀ ಜನಾರ್ದನ ದೇವಸ್ಥಾನದ ಶರತಕೃಷ್ಣ ಪಡುವೆಟ್ನಾಯ ಅಧ್ಯಕ್ಷತೆ ವಹಿಸಿದ್ದರು.
ಜಾತ್ರೆಯ ಪೇಟೆ ಸವಾರಿ ಜ. 19ರಂದು ರಾತ್ರಿ 8:30ರ ಬಳಿಕ ಜರಗಲಿದ್ದು,ಆರ್ಥಿಕ ಸಮಿತಿ ಆಹಾರ ಹಾಗೂ ಅಲಂಕಾರ ಸಮಿತಿ ಸದಸ್ಯರು ಹಾಗೂ ಉಜಿರೆಯ ವರ್ತಕರ ಜತೆ ಚರ್ಚಿಸಲಾಯಿತು. ಸ್ವಚ್ಛತೆಗೆ ಆದ್ಯತೆ ನೀಡಿ ಅದ್ದೂರಿಯಾಗಿ ಪೇಟೆ ಸವಾರಿ ನಡೆಸುವ ಕುರಿತು ನಿರ್ಣಯಿಸಲಾಯಿತು.
ಜ.28ರಂದು ಜರಗಲಿರುವ ಯಕ್ಷಗಾನ ಕಾರ್ಯಕ್ರಮಕ್ಕೆ ಸಂಪನ್ಮೂಲ ಕ್ರೋಢೀಕರಣದ ಕುರಿತು ಸದಸ್ಯರಿಗೆ ವಿವರಗಳನ್ನು ಒದಗಿಸಲಾಯಿತು.
ಜ.31 ರಿಂದ ಫೆ.6ರ ತನಕ ಜರಗಲಿರುವ ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಬಗ್ಗೆ ಉಜಿರೆ ಗ್ರಾಮದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಆಮಂತ್ರಣ ಹಂಚುವ ಕುರಿತು,ಫೆ.3ರಂದು ಉಜಿರೆ ಗ್ರಾಮಸ್ಥರಿಂದ ಹೊರೆಕಾಣಿಕೆ ನೀಡುವ ಕುರಿತು ನಿರ್ಣಯಿಸಲಾಯಿತು.
ಪೇಟೆ ಸವಾರಿ ಸಮಿತಿ ಅಧ್ಯಕ್ಷ ಭರತ್ ಕುಮಾರ್, ಯಕ್ಷಗಾನ ಸಮಿತಿಯ ಅಧ್ಯಕ್ಷ ಅರವಿಂದ ಕಾರಂತ, ಕಾರ್ಯದರ್ಶಿ ಗೋಪಾಲಕೃಷ್ಣ, ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಪಜಿರಡ್ಕ ದೇವಸ್ಥಾನದ ದೇವಸ್ಥಾನದ ಸಮಿತಿಗಳ ಮುಖ್ಯಸ್ಥರಾದ ತುಕಾರಾಮ ಸಾಲಿಯನ್, ಕೃಷ್ಣಪ್ಪ ಗುಡಿಗಾರ, ಶಶಿಕಿರಣ ಜೈನ್,ಗೋಪಾಲಕೃಷ್ಣ ಗುಲ್ಲೋಡಿ, ಮಂಜುನಾಥ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
ಪೇಟೆ ಸವಾರಿ ಸಮಿತಿಯ ಕಾರ್ಯದರ್ಶಿ ಶ್ರೀಧರ ಕೆ.ವಿ.ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya
error: Content is protected !!