22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದು ಇಕೆವೈಸಿ ಮಾಡಿಸಲು ಸೂಚಿಸಲಾಗಿದೆ.


ಇಕೆವೈಸಿ ಮಾಡಿಸದೆ ಇದ್ದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ ಮುಂದೆ ಬರುವ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇರುವುದಿಲ್ಲ. ಈ ಕುರಿತು ತಾಲೂಕಿನ ರೈತರು ಸ್ವತ:(PMkissan.gov.in) ತಂತ್ರಾಂಶದಲ್ಲಿ ಒಟಿಪಿ ದ ಕಳಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ತಮ್ಮ ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಿಸಿ ಕಡ್ಡಾಯವಾಗಿ ಇಕೆವೈಸಿ ಮಾಡಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಇಕೆವೈಸಿ ಮಾಡಿಸಲು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮಟ್ಟದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಡಿಜಿಟಲ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related posts

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya
error: Content is protected !!