38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಮುಂಡಾಜೆ:ಇಲ್ಲಿನ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನೋತ್ಸವವನ್ನು ʼರಾಷ್ಟ್ರೀಯ ಯುವ ದಿನʼವನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಾ.ಸುಬ್ರಹ್ಮಣ್ಯ ಕೆ. ಮಾತನಾಡಿ,” ಸ್ವಾಮಿ ವಿವೇಕಾನಂದರು ಭಾರತದ ಸಂಸೃತಿ, ಜ್ಞಾನ, ಆಧ್ಯಾತ್ಮಿಕತೆ ಮತ್ತು ಸಹೋದರತೆಯನ್ನು ಜಗತ್ತಿಗೆ ಸಾರಿದವರು. ಇಂದಿನ ಯುವ ಜನತೆ ವಿವೇಕಾನಂದರ ಆದರ್ಶಗಳನ್ನು ಸಂಕಲ್ಪ ಮಾಡಿ ಅನುಷ್ಟಾನಕ್ಕೆ ತರಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಸ್ಥಾನೀಯ ಸಮಿತಿ ಅಧ್ಯಕ್ಷ ವಿನಯಚಂದ್ರ ವಹಿಸಿದ್ದರು. ಪ್ರಿನ್ಸಿಪಾಲ್ ಜಾಲಿ ಡಿ’ಸೋಜ ಉಪಸ್ಥಿತರಿದ್ದರು. ಇಂಗ್ಲಿಷ್‌ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ಮನಃಶಾಸ್ತ್ರ ಉಪನ್ಯಾಸಕಿ ನಮಿತಾ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ಉಪನ್ಯಾಸಕಿ ಗೀತಾ ಗೋಪಾಲ್ ವಂದಿಸಿದರು.

Related posts

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
error: Content is protected !!