23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವದ ಪ್ರಯುಕ್ತ ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಯುವಜನ ಒಕ್ಕೂಟ, ಜಿಲ್ಲೆಯ ಎಲ್ಲಾ ತಾಲೂಕು ಯುವಜನ ಒಕ್ಕೂಟಗಳು ಮತ್ತು ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ‘ವಿವೇಕರಥ- ಯುವ ಪಥ ಯುವಜಾಗೃತಿ ಜಾಥಾ’ ರಥಯಾತ್ರೆಯನ್ನು ಹಮ್ಮಿಕೊಂಡಿದ್ದು ಈ ಪ್ರಯುಕ್ತ ಮೂಡಬಿದ್ರಿಯಿಂದ ಬೆಳ್ತಂಗಡಿ ತಾಲೂಕಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ಹೊಸಂಗಡಿ ಗ್ರಾಮದ ಗಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಹೊಸಂಗಡಿ ಪ್ರೆಂಡ್ಸ್ ಕ್ಲಬ್ ನ ಆಶ್ರಯದಲ್ಲಿ ನಡೆದ ಚುಟುಕು ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಹೊಸಂಗಡಿ ಪಂಚಾಯತ್ ಅಧ್ಯಕ್ಷ ಕರುಣಾಕರ ಪೂಜಾರಿ ಅಧ್ಯಕ್ಷತೆ ವಹಿಸಿ ಶ್ರೀ ವಿವೇಕಾನಂದ ಮೂರ್ತಿಗೆ ಹೂ ಹಾರ ಹಾಕಿ ಗೌರವ

ಸೂಚಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ನಿರ್ರ್ವಹಿಸಿದ , ಈ ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು ಹರಿಪ್ರಸಾದ್ ಸ್ವಾಗತಿಸಿದರು. ಮಾಜಿ ತಾಲೂಕು ಪಂಚಾಯತ್ ಸದಸ್ಯರ ವಿಜಯ ಗೌಡ ,ಶ್ರಿಪತಿ ಉಪಧ್ಯಾಯ, ಖಾಲಿದ್ ಪೂಲಬೆ, ಪದ್ಮಪೂಜಾರಿ ಪೇರಿ,ಇಸ್ಮಾಯಿಲ್ ಕೆ ಪೆರಿಂಜೆ, ಪಂಚಾಯತ್ ಉಪಾಧ್ಯಕ್ಷೆ, ಸದಸ್ಯರು, ಬೆಳ್ತಂಗಡಿ ತಾಲೂಕು ಒಕ್ಕೂಟ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಜಿಲ್ಲಾ ಯುವಜನ ಒಕ್ಕೂಟ ಪದಾಧಿಕಾರಿಗಳು ಊರ ಗಣ್ಯರು ಉಪಸ್ಥಿತರಿದ್ದರು.

Related posts

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!