35.1 C
ಪುತ್ತೂರು, ಬೆಳ್ತಂಗಡಿ
April 11, 2025
Uncategorized

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

ಬೆಳಾಲು:ಬೆಳಾಲು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಇನ್ಫೋಮೆಟ್ ಫೌಂಡೇಶನ್ ಮಂಗಳೂರು ಇವರಿಂದ, ವ್ಯಕ್ತಿತ್ವ ವಿಕಸನ ಮತ್ತು ಪರೀಕ್ಷಾ ಸಿದ್ಧತೆ ವಿಷಯದಲ್ಲಿ ತರಬೇತು ಕಾರ್ಯಾಗಾರ ಜರಗಿತು.

ತರಬೇತುದಾರರಾದ ಮಂಗಳೂರಿನ ಸ್ವಯಂ ಸೇವಾ ಸಂಸ್ಥೆಯ ಕಾರ್ಯಕರ್ತರು,ಆಪ್ತ ಸಲಹೆಗಾರರು ಆಗಿರುವ ಅಬ್ದುಲ್ ಖಾದರ್ ಮತ್ತು ಬೆಂಗಳೂರಿನ ಐಟಿ ಉದ್ಯೋಗಿ ಮಹಮ್ಮದ್ ತೌಸಿಫ್ ರವರು ತರಬೇತಿಯನ್ನು ನಡೆಸಿಕೊಟ್ಟರು.

ತರಬೇತುದಾರರಾದ ಮಹಮ್ಮದ್ ತೌಸಿಫ್ ಮಾತನಾಡಿ” ದುಡಿಮೆ ಯಶಸ್ಸಿನ ಮೂಲಮಂತ್ರ. ವಿದ್ಯಾರ್ಥಿಗಳು ಕನಸು ಕಾಣಬೇಕು, ನನಸಾಗುವಂತೆ ಯೋಜನಾಬದ್ಧವಾಗಿ ಪರಿಶ್ರಮಪಡಬೇಕು. ಜತೆಗೆ ಸಕಾರಾತ್ಮಕ ಮನೋಭಾವ, ಸ್ವೀಕಾರಶೀಲ ಸ್ವಭಾವ, ದುರಾಭ್ಯಾಸ ರಹಿತ ಜೀವನದ ಸಂಕಲ್ಪವಿರುವವರು ಯಶಸ್ವೀ ಸಾಧಕರಾಗಬಹುದು” ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಗುರಿ ನಿರ್ಧಾರ, ಆತ್ಮವಿಶ್ವಾಸ, ಅಧ್ಯಯನ ತಂತ್ರಗಳ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಸ್ವಾಗತಿಸಿದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ಕಾರ್ಯದರ್ಶಿ ಮಹಮ್ಮದ್ ಶರೀಫ್ ಉಪಸ್ಥಿತರಿದ್ದರು.
ಹಳೆವಿದ್ಯಾರ್ಥಿ ಸಂಘದ ಸಂಚಾಲಕ ಉಮೇಶ್ ಮಂಜೊತ್ತು ವಂದಿಸಿದರು. ಹಿರಿಯ ಶಿಕ್ಷಕಿ ವಾರಿಜಾ ಎಸ್. ಗೌಡ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕರು, ಸಿಬ್ಬಂದಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Related posts

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!