September 6, 2026
Uncategorized

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

ಬೆಳಾಲು:ಬೆಳಾಲು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಇನ್ಫೋಮೆಟ್ ಫೌಂಡೇಶನ್ ಮಂಗಳೂರು ಇವರಿಂದ, ವ್ಯಕ್ತಿತ್ವ ವಿಕಸನ ಮತ್ತು ಪರೀಕ್ಷಾ ಸಿದ್ಧತೆ ವಿಷಯದಲ್ಲಿ ತರಬೇತು ಕಾರ್ಯಾಗಾರ ಜರಗಿತು.

ತರಬೇತುದಾರರಾದ ಮಂಗಳೂರಿನ ಸ್ವಯಂ ಸೇವಾ ಸಂಸ್ಥೆಯ ಕಾರ್ಯಕರ್ತರು,ಆಪ್ತ ಸಲಹೆಗಾರರು ಆಗಿರುವ ಅಬ್ದುಲ್ ಖಾದರ್ ಮತ್ತು ಬೆಂಗಳೂರಿನ ಐಟಿ ಉದ್ಯೋಗಿ ಮಹಮ್ಮದ್ ತೌಸಿಫ್ ರವರು ತರಬೇತಿಯನ್ನು ನಡೆಸಿಕೊಟ್ಟರು.

ತರಬೇತುದಾರರಾದ ಮಹಮ್ಮದ್ ತೌಸಿಫ್ ಮಾತನಾಡಿ” ದುಡಿಮೆ ಯಶಸ್ಸಿನ ಮೂಲಮಂತ್ರ. ವಿದ್ಯಾರ್ಥಿಗಳು ಕನಸು ಕಾಣಬೇಕು, ನನಸಾಗುವಂತೆ ಯೋಜನಾಬದ್ಧವಾಗಿ ಪರಿಶ್ರಮಪಡಬೇಕು. ಜತೆಗೆ ಸಕಾರಾತ್ಮಕ ಮನೋಭಾವ, ಸ್ವೀಕಾರಶೀಲ ಸ್ವಭಾವ, ದುರಾಭ್ಯಾಸ ರಹಿತ ಜೀವನದ ಸಂಕಲ್ಪವಿರುವವರು ಯಶಸ್ವೀ ಸಾಧಕರಾಗಬಹುದು” ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಗುರಿ ನಿರ್ಧಾರ, ಆತ್ಮವಿಶ್ವಾಸ, ಅಧ್ಯಯನ ತಂತ್ರಗಳ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಸ್ವಾಗತಿಸಿದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ಕಾರ್ಯದರ್ಶಿ ಮಹಮ್ಮದ್ ಶರೀಫ್ ಉಪಸ್ಥಿತರಿದ್ದರು.
ಹಳೆವಿದ್ಯಾರ್ಥಿ ಸಂಘದ ಸಂಚಾಲಕ ಉಮೇಶ್ ಮಂಜೊತ್ತು ವಂದಿಸಿದರು. ಹಿರಿಯ ಶಿಕ್ಷಕಿ ವಾರಿಜಾ ಎಸ್. ಗೌಡ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕರು, ಸಿಬ್ಬಂದಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Related posts

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya
error: Content is protected !!