22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

ಬೆಳಾಲು:ಬೆಳಾಲು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಇನ್ಫೋಮೆಟ್ ಫೌಂಡೇಶನ್ ಮಂಗಳೂರು ಇವರಿಂದ, ವ್ಯಕ್ತಿತ್ವ ವಿಕಸನ ಮತ್ತು ಪರೀಕ್ಷಾ ಸಿದ್ಧತೆ ವಿಷಯದಲ್ಲಿ ತರಬೇತು ಕಾರ್ಯಾಗಾರ ಜರಗಿತು.

ತರಬೇತುದಾರರಾದ ಮಂಗಳೂರಿನ ಸ್ವಯಂ ಸೇವಾ ಸಂಸ್ಥೆಯ ಕಾರ್ಯಕರ್ತರು,ಆಪ್ತ ಸಲಹೆಗಾರರು ಆಗಿರುವ ಅಬ್ದುಲ್ ಖಾದರ್ ಮತ್ತು ಬೆಂಗಳೂರಿನ ಐಟಿ ಉದ್ಯೋಗಿ ಮಹಮ್ಮದ್ ತೌಸಿಫ್ ರವರು ತರಬೇತಿಯನ್ನು ನಡೆಸಿಕೊಟ್ಟರು.

ತರಬೇತುದಾರರಾದ ಮಹಮ್ಮದ್ ತೌಸಿಫ್ ಮಾತನಾಡಿ” ದುಡಿಮೆ ಯಶಸ್ಸಿನ ಮೂಲಮಂತ್ರ. ವಿದ್ಯಾರ್ಥಿಗಳು ಕನಸು ಕಾಣಬೇಕು, ನನಸಾಗುವಂತೆ ಯೋಜನಾಬದ್ಧವಾಗಿ ಪರಿಶ್ರಮಪಡಬೇಕು. ಜತೆಗೆ ಸಕಾರಾತ್ಮಕ ಮನೋಭಾವ, ಸ್ವೀಕಾರಶೀಲ ಸ್ವಭಾವ, ದುರಾಭ್ಯಾಸ ರಹಿತ ಜೀವನದ ಸಂಕಲ್ಪವಿರುವವರು ಯಶಸ್ವೀ ಸಾಧಕರಾಗಬಹುದು” ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಗುರಿ ನಿರ್ಧಾರ, ಆತ್ಮವಿಶ್ವಾಸ, ಅಧ್ಯಯನ ತಂತ್ರಗಳ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಸ್ವಾಗತಿಸಿದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ಕಾರ್ಯದರ್ಶಿ ಮಹಮ್ಮದ್ ಶರೀಫ್ ಉಪಸ್ಥಿತರಿದ್ದರು.
ಹಳೆವಿದ್ಯಾರ್ಥಿ ಸಂಘದ ಸಂಚಾಲಕ ಉಮೇಶ್ ಮಂಜೊತ್ತು ವಂದಿಸಿದರು. ಹಿರಿಯ ಶಿಕ್ಷಕಿ ವಾರಿಜಾ ಎಸ್. ಗೌಡ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕರು, ಸಿಬ್ಬಂದಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Related posts

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya
error: Content is protected !!