23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಮಧುಶ್ರೀ ವರ್ಷದ ಯುವ ವಿಜ್ಞಾನಿ ಪ್ರಶಸ್ತಿ

ಉಜಿರೆ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಆಶ್ರಯದಲ್ಲಿ ಕಲಬುರ್ಗಿಯ ಖಣದಾಳದಲ್ಲಿ ನಡೆದ 30ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಉಜಿರೆಯ ಶ್ರೀಧ.ಮಂ. ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮಂಡಿಸಿದ ‘ಅಡಕೆ ಸಿಪ್ಪೆಯಿಂದ ಪೇಪರ್ ತಯಾರಿ’ ಎಂಬ ಕಾರ್ಯಯೋಜನೆಗೆ ಗ್ರಾಮೀಣ ವಿಭಾಗದ ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ದೊರೆತಿದ್ದು ಅವರು ವರ್ಷದ ಯುವ ವಿಜ್ಞಾನಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ 210ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಇದರಲ್ಲಿ ಆರು ವಿದ್ಯಾರ್ಥಿಗಳು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದು ಮಧುಶ್ರೀ ಪ್ರಥಮ ಸ್ಥಾನ ಪಡೆದರು. ರಾಷ್ಟ್ರಮಟ್ಟದ ಸಮಾವೇಶ ಜ. 28ರಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯಲಿದೆ.
ಕಾರ್ಯಯೋಜನೆಯಲ್ಲಿ ಇದೇ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ವಿಜ್ಞಾನ ಶಿಕ್ಷಕಿ ಶೋಭಾ ಅವರು ಕಾರ್ಯಯೋಜನೆಗೆ
ಮಾರ್ಗದರ್ಶನ ನೀಡಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ: “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ” ದ ಉದ್ಘಾಟನಾ ಸಮಾರಂಭ

Suddi Udaya

ಜುಲೈ 19ರಂದು ಪ್ರಾಥಮಿಕ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!