23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಮಧುಶ್ರೀ ವರ್ಷದ ಯುವ ವಿಜ್ಞಾನಿ ಪ್ರಶಸ್ತಿ

ಉಜಿರೆ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಆಶ್ರಯದಲ್ಲಿ ಕಲಬುರ್ಗಿಯ ಖಣದಾಳದಲ್ಲಿ ನಡೆದ 30ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಉಜಿರೆಯ ಶ್ರೀಧ.ಮಂ. ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮಂಡಿಸಿದ ‘ಅಡಕೆ ಸಿಪ್ಪೆಯಿಂದ ಪೇಪರ್ ತಯಾರಿ’ ಎಂಬ ಕಾರ್ಯಯೋಜನೆಗೆ ಗ್ರಾಮೀಣ ವಿಭಾಗದ ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ದೊರೆತಿದ್ದು ಅವರು ವರ್ಷದ ಯುವ ವಿಜ್ಞಾನಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ 210ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಇದರಲ್ಲಿ ಆರು ವಿದ್ಯಾರ್ಥಿಗಳು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದು ಮಧುಶ್ರೀ ಪ್ರಥಮ ಸ್ಥಾನ ಪಡೆದರು. ರಾಷ್ಟ್ರಮಟ್ಟದ ಸಮಾವೇಶ ಜ. 28ರಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯಲಿದೆ.
ಕಾರ್ಯಯೋಜನೆಯಲ್ಲಿ ಇದೇ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ವಿಜ್ಞಾನ ಶಿಕ್ಷಕಿ ಶೋಭಾ ಅವರು ಕಾರ್ಯಯೋಜನೆಗೆ
ಮಾರ್ಗದರ್ಶನ ನೀಡಿದ್ದರು.

Related posts

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಉಜಿರೆ ಎಸ್.ಡಿ.ಎಮ್. ಪಿಯು ಕಾಲೇಜಿನಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya
error: Content is protected !!