July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ


ಬೆಳ್ತಂಗಡಿ: ಮಹರಾಷ್ಟ್ರದ ಚುರುಕಿನ ರಾಜಕೀಯ ಮುಖಂಡ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಕಚೇರಿಗೆ ಭೇಟಿಯಾದ್ರು. ಚಿಕ್ಕಮಗಳೂರು ತೆರಳುವ ದಾರಿ ಮಧ್ಯೆ ಶಾಸಕರ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ,

ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಹಲವಾರು ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು ಈ ವೇಳೆ ಶಾಸಕ ಹರೀಶ್ ಪೂಂಜ ದೇವೇಂದ್ರ ಫಡ್ನವಿಸ್ ಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಪ್ರತಾಪ ಸಿಂಹ ನಾಯಕ್ ಹಾರ ಹಾಕಿ ಗೌರವಿಸಿದ್ರೆ, ಜಯಂತ್ ಕೋಟ್ಯಾನ್ ಪೇಟ ತೋಡಿಸಿ ಅಭಿನಂದಿಸಿದ್ರು. ಅಪಾರ ಕಾರ್ಯಕರ್ತರ ಸಮ್ಮುಖದಲ್ಲಿ ಗೌರವ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಎಲ್ಲರಿಗೂ ಧನ್ಯವಾದ ತಿಳಿಸಿ, ಶಾಸಕರಿಗೆ ಶುಭ ಹಾರೈಸಿ ಚಿಕ್ಕಮಗಳೂರಿನತ್ತ ಪ್ರಯಾಣ ಬೆಳೆಸಿದ್ರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ, ಶ್ರೀನಿವಾಸ ರಾವ್, ಸೀತಾರಾಮ ಬೆಳಾಲು, ನ.ಪಂ ಅಧ್ಯಕ್ಷೆ ರಜನಿ ಕುಡ್ವ, ಜಯಂತ ಗೌಡ ಸೇರಿದಂತೆ ಕಾಯ೯ಕತ೯ರು ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!