22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ


ಬೆಳ್ತಂಗಡಿ: ಮಹರಾಷ್ಟ್ರದ ಚುರುಕಿನ ರಾಜಕೀಯ ಮುಖಂಡ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಕಚೇರಿಗೆ ಭೇಟಿಯಾದ್ರು. ಚಿಕ್ಕಮಗಳೂರು ತೆರಳುವ ದಾರಿ ಮಧ್ಯೆ ಶಾಸಕರ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ,

ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಹಲವಾರು ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು ಈ ವೇಳೆ ಶಾಸಕ ಹರೀಶ್ ಪೂಂಜ ದೇವೇಂದ್ರ ಫಡ್ನವಿಸ್ ಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಪ್ರತಾಪ ಸಿಂಹ ನಾಯಕ್ ಹಾರ ಹಾಕಿ ಗೌರವಿಸಿದ್ರೆ, ಜಯಂತ್ ಕೋಟ್ಯಾನ್ ಪೇಟ ತೋಡಿಸಿ ಅಭಿನಂದಿಸಿದ್ರು. ಅಪಾರ ಕಾರ್ಯಕರ್ತರ ಸಮ್ಮುಖದಲ್ಲಿ ಗೌರವ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಎಲ್ಲರಿಗೂ ಧನ್ಯವಾದ ತಿಳಿಸಿ, ಶಾಸಕರಿಗೆ ಶುಭ ಹಾರೈಸಿ ಚಿಕ್ಕಮಗಳೂರಿನತ್ತ ಪ್ರಯಾಣ ಬೆಳೆಸಿದ್ರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ, ಶ್ರೀನಿವಾಸ ರಾವ್, ಸೀತಾರಾಮ ಬೆಳಾಲು, ನ.ಪಂ ಅಧ್ಯಕ್ಷೆ ರಜನಿ ಕುಡ್ವ, ಜಯಂತ ಗೌಡ ಸೇರಿದಂತೆ ಕಾಯ೯ಕತ೯ರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya
error: Content is protected !!