24 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ


ಬೆಳ್ತಂಗಡಿ: ಮಹರಾಷ್ಟ್ರದ ಚುರುಕಿನ ರಾಜಕೀಯ ಮುಖಂಡ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಕಚೇರಿಗೆ ಭೇಟಿಯಾದ್ರು. ಚಿಕ್ಕಮಗಳೂರು ತೆರಳುವ ದಾರಿ ಮಧ್ಯೆ ಶಾಸಕರ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ,

ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಹಲವಾರು ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು ಈ ವೇಳೆ ಶಾಸಕ ಹರೀಶ್ ಪೂಂಜ ದೇವೇಂದ್ರ ಫಡ್ನವಿಸ್ ಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಪ್ರತಾಪ ಸಿಂಹ ನಾಯಕ್ ಹಾರ ಹಾಕಿ ಗೌರವಿಸಿದ್ರೆ, ಜಯಂತ್ ಕೋಟ್ಯಾನ್ ಪೇಟ ತೋಡಿಸಿ ಅಭಿನಂದಿಸಿದ್ರು. ಅಪಾರ ಕಾರ್ಯಕರ್ತರ ಸಮ್ಮುಖದಲ್ಲಿ ಗೌರವ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಎಲ್ಲರಿಗೂ ಧನ್ಯವಾದ ತಿಳಿಸಿ, ಶಾಸಕರಿಗೆ ಶುಭ ಹಾರೈಸಿ ಚಿಕ್ಕಮಗಳೂರಿನತ್ತ ಪ್ರಯಾಣ ಬೆಳೆಸಿದ್ರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ, ಶ್ರೀನಿವಾಸ ರಾವ್, ಸೀತಾರಾಮ ಬೆಳಾಲು, ನ.ಪಂ ಅಧ್ಯಕ್ಷೆ ರಜನಿ ಕುಡ್ವ, ಜಯಂತ ಗೌಡ ಸೇರಿದಂತೆ ಕಾಯ೯ಕತ೯ರು ಉಪಸ್ಥಿತರಿದ್ದರು.

Related posts

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya
error: Content is protected !!