24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಧ್ಯಕರಾದ ಜೇಸಿ ಕಿರಣ್ ಕುಮಾರ್ ಶೆಟ್ಟಿ ಅವರ ಮನೆಯಲ್ಲಿ ನಡೆದ ಕುಟುಂಬೊಸ್ಸವ ಕಾರ್ಯಕ್ರಮದಲ್ಲಿ ಒಂದು ಅನೂಹ್ಯವಾದ ಪ್ರಯತ್ನವನ್ನು ಮಾಡಿದೆ.

ಸೆಲ್ಯೂಟ್ ದ ಸೈಲೆಂಟ್ ವರ್ಕರ್ಸ್ ಸಂಚಾರಿ ಆರಕ್ಷಕರಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ರೋಹಿನಾಥ್ ಮತ್ತು ಶ್ರೀಮತಿ ಸವಿತಾ ಶೆಟ್ಟಿ ಇವರುಗಳನ್ನು ಗುರುತಿಸಿ ಗೌರವಿಸಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ವಹಿಸಿ, ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ವರ್ತಕರ ಸಂಘದ ಅಧ್ಯಕ್ಷರಾದ ಶ್ರೀ ಪುಷ್ಪರಾಜ್ ಶೆಟ್ಟಿ, ಸುದ್ದಿಬಿಡುಗಡೆ ವಾರ ಪತ್ರಿಕೆಯ ಬೆಳ್ತಂಗಡಿ ವ್ಯವಸ್ಥಾಪಕರಾದ ಶ್ರೀ ಮಂಜುನಾಥ್ ರೈ ಮತ್ತು ಬೆಳ್ತಂಗಡಿ ಸರಕಾರಿ . ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿಯ ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ಪ್ರಸಾದ್ ಬಿ. ಎಸ್, ಮಹಿಳಾ ಜೆಸಿ ಸಂಯೋಜಕಿ ಮಮಿತಾ ಸುಧೀರ್, ಜೂನಿಯರ್ ಜೆಸಿ ಅಧ್ಯಕ್ಷ ಜೆಜೆಸಿ ರಾಮಕೃಷ್ಣ ಮತ್ತು ಕಾರ್ಯಕ್ರಮ ಸಂಯೋಜಕ ಜೆಸಿ ಸೃಜನ್ ರ್ ರೈ ಉಪಸ್ಥಿತರಿದ್ದರು.

ಘಟಕದ ಉಪಾಧ್ಯಕ್ಷ ಜೆಸಿ ರಂಜಿತ್ ವೇದಿಕೆಗೆ ಅತಿಥಿಗಳನ್ನು ಬರಮಾಡಿಕೊಂಡರು, ಸದಸ್ಯ ಜೆಸಿ ಅನುದೀಪ್ ಜೈನ್ ಜೆಸಿ ವಾಣಿ ವಾಚಿಸಿದರು, ಸದಸ್ಯೆ ಜೆಸಿ ಸುಭಾಷಿಣಿ ಸನ್ಮಾನಿತರ ಪರಿಚಯ ವಾಚಿಸಿದರು.
ಘಟಕದ ಕಾರ್ಯದರ್ಶಿ ಜೆಸಿ ಸುಧೀರ್ ಕೆ ಎನ್ ಧನ್ಯವಾದ ಸಮರ್ಪಿಸಿದರು. ನಂತರ ನಡೆದ ಮನೋರಂಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯೆ ಜೆಸಿ ಆರೋಲಿನ್ ಡಿ. ಸೋಜಾ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿಯ ಪೂರ್ವಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ