23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ಮತ್ತು ದ.ಕ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ನೇತೃತ್ವದಲ್ಲಿ ಶಿಬಾಜೆ ಗ್ರಾಮದಲ್ಲಿ ದಲಿತ ಯುವಕ ಶ್ರೀಧರ್ ಅವರ

ಅಮಾನುಷ ಕೊಲೆಯನ್ನು ಖಂಡಿಸಿ, ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ, ಶಿಬಾಜೆ ಗ್ರಾಮ ಮತ್ತು ರಾಜ್ಯಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ಧರ್ಮಸ್ಥಳದ ನೇತ್ರಾವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಪೊಲೀಸ್ ಠಾಣೆಯ ಎದುರು ಬೃಹತ್ ಪ್ರತಿಭಟನೆ ಜ.23 ರಂದು ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶ್ ಅಂಬುಗ, ಮಾತನಾಡಿ, ದಲಿತ ಮೇಲೆ ದೌರ್ಜನ್ಯ ಒಂದು ಜಿಲ್ಲೆಯ ಸಮಸ್ಯೆಯಲ್ಲ, ಇಡೀ ರಾಜ್ಯದಲ್ಲಿ ದಲಿತರನ್ನು ದಮನಿಸುವ ಕಾರ್ಯ ಇಂದು ನಡೆಯುತ್ತಿದೆ. ನಮಗೆ ರಕ್ಷಣೆ ನೀಡಿ, ಜನಸ್ನೇಹಿಯಾಗಬೇಕಾಗಿದ್ದ ಪೊಲೀಸರು, ದಲಿತರ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ, ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್,
ದ.ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ನೇಮಿರಾಜ ಕಿಲ್ಲೂರು, ಶೇಖರ ಕುಕ್ಕೇಡಿ, ರಮೇಶ್. ಆರ್, ತಾಲೂಕು ಮೋಗೇರ ಸಂಘದ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿ, ಸೇಸಪ್ಪ ಬೆದ್ರಕಾಡು, ಆನಂದ ಮಂಗಳೂರು, ವಸಂತ ಕುಬಲಾಡಿ, ಮೋನಪ್ಪ ಚಿಕ್ಕಮಗಳೂರು, ಪ್ರಭಾಕರ ನಲ್ಕೆ, ಗಿರೀಶ್ ಉಳ್ಳಾಲ, ಮೋನಪ್ಪ ಮೂಡಿಗೆರೆ, ಶೇಖರ್. ಎಲ್, ಬೇಬಿ ಸುವರ್ಣ, ಲೋಕೇಶ್ ಪಡುಬಿದ್ರೆ, ರವಿ ಮೂಡಿಗೆರೆ ಹಾಗೂ ಡಿಎಸ್‌ಎಸ್ ತಾಲೂಕಿನ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರತಿಭಟನೆಗೆ ಮಾಜಿ ಸಚಿವ ಕೆ. ಗಂಗಾಧರ ಗೌಡ, ಬೆಸ್ಟ್ ಪೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಕಾರ್ಮಿಕ ಮುಖಂಡ ಬಿ.ಎಂ ಭಟ್, ಎಲ್. ಮಂಜುನಾಥ್ ಆಗಮಿಸಿ ಬೆಂಬಲ ಸೂಚಿಸಿದರು. ಪ್ರತಿಭಟನೆಗೆ ಮೊದಲು ನೇತ್ರಾವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

Related posts

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya
error: Content is protected !!