September 6, 2026
ಕೃಷಿಗ್ರಾಮಾಂತರ ಸುದ್ದಿ

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಕ್ಕೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ರವರು. ಜ.23 ರಂದು ಗೇರುಕಟ್ಟೆ ಯಲ್ಲಿ ನೆರವೇರಿಸಿದರು.

ಕುಂಠಿನಿ ವೇ.ಮೂ. ರಾಘವೇಂದ್ರ ಬಾಂಗಿಣ್ಣಾಯರ ನೇತೃತ್ವದಲ್ಲಿ ಪೂಜಾ- ವಿಧಿ,ವಿಧಾನಗಳೊಂದಿಗೆ ಜರುಗಿತು. ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ,ಸಭೆಯ ಅಧ್ಯಕ್ಷತೆ ವಹಿಸಿದ್ದರು.ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ, ಮಂಗಳೂರು ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಪದ್ಮನಾಭ ಆರ್ಕಜೆ,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು,ಶ್ರೀ ಕ್ಷೇತ್ರ ಧ.ಗ್ರಾ.ಯೋ.ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ,ಹಾಲು ಉತ್ಪಾದಕರ ಸಂಘದ ವಿಸ್ತಾರಣಧಿಕಾರಿ ರಾಜೇಶ್ ಕಾಮತ್,ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆರ್ಬುಡ,ಕಳಿಯ ಗ್ರಾಮ ಪಂಚಾಯತ್ ಸದಸ್ಯ, ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುಧಾಕರ ಮಜಲು, ಕಳಿಯ ಬೀಡು ಸುರೇಂದ್ರ ಕುಮಾರ್ ಜೈನ್,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಕೆ.ಕುಶಲಾವತಿ,ಕಣಿಯೂರು ಮಹಿಳಾ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಭಾರತಿ, ಕಳಿಯ ಪ್ರಗತಿ ಬಂಧು ಅಧ್ಯಕ್ಷೆ ತಿಲೋತ್ತಮ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ನಾಳ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಮ್, ಗುರುವಾಯನಕೆರೆ ಹಾಲು ಸಂಘದ ಉಪಾಧ್ಯಕ್ಷ ಪೂವಪ್ಪ ಭಂಡಾರಿ,ಮಡಂತ್ಯಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಎಮ್,ವಿಜಯ ಕುಮಾರ್ ಕೆ,ಹರೀಶ್ ಕುಮಾರ್ ಬಿ,ಇಂದಿರಾ ಬಿ ಶೆಟ್ಟಿ, ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಬಾಲಕೃಷ್ಣ ಗೌಡ ಬಿರ್ಮೋಟ್ಟು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶೇಖರ ನಾಯ್ಕ,ರತ್ನಾಕರ ಪೂಜಾರಿ ಬಿ.ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಸಂಜೀವ ಬಂಗೇರ,ಹಾಲಿ ನಿರ್ದೇಶಕರು, ಸರ್ವ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya
error: Content is protected !!