25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿ

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಕ್ಕೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ರವರು. ಜ.23 ರಂದು ಗೇರುಕಟ್ಟೆ ಯಲ್ಲಿ ನೆರವೇರಿಸಿದರು.

ಕುಂಠಿನಿ ವೇ.ಮೂ. ರಾಘವೇಂದ್ರ ಬಾಂಗಿಣ್ಣಾಯರ ನೇತೃತ್ವದಲ್ಲಿ ಪೂಜಾ- ವಿಧಿ,ವಿಧಾನಗಳೊಂದಿಗೆ ಜರುಗಿತು. ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ,ಸಭೆಯ ಅಧ್ಯಕ್ಷತೆ ವಹಿಸಿದ್ದರು.ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ, ಮಂಗಳೂರು ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಪದ್ಮನಾಭ ಆರ್ಕಜೆ,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು,ಶ್ರೀ ಕ್ಷೇತ್ರ ಧ.ಗ್ರಾ.ಯೋ.ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ,ಹಾಲು ಉತ್ಪಾದಕರ ಸಂಘದ ವಿಸ್ತಾರಣಧಿಕಾರಿ ರಾಜೇಶ್ ಕಾಮತ್,ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆರ್ಬುಡ,ಕಳಿಯ ಗ್ರಾಮ ಪಂಚಾಯತ್ ಸದಸ್ಯ, ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುಧಾಕರ ಮಜಲು, ಕಳಿಯ ಬೀಡು ಸುರೇಂದ್ರ ಕುಮಾರ್ ಜೈನ್,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಕೆ.ಕುಶಲಾವತಿ,ಕಣಿಯೂರು ಮಹಿಳಾ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಭಾರತಿ, ಕಳಿಯ ಪ್ರಗತಿ ಬಂಧು ಅಧ್ಯಕ್ಷೆ ತಿಲೋತ್ತಮ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ನಾಳ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಮ್, ಗುರುವಾಯನಕೆರೆ ಹಾಲು ಸಂಘದ ಉಪಾಧ್ಯಕ್ಷ ಪೂವಪ್ಪ ಭಂಡಾರಿ,ಮಡಂತ್ಯಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಎಮ್,ವಿಜಯ ಕುಮಾರ್ ಕೆ,ಹರೀಶ್ ಕುಮಾರ್ ಬಿ,ಇಂದಿರಾ ಬಿ ಶೆಟ್ಟಿ, ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಬಾಲಕೃಷ್ಣ ಗೌಡ ಬಿರ್ಮೋಟ್ಟು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶೇಖರ ನಾಯ್ಕ,ರತ್ನಾಕರ ಪೂಜಾರಿ ಬಿ.ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಸಂಜೀವ ಬಂಗೇರ,ಹಾಲಿ ನಿರ್ದೇಶಕರು, ಸರ್ವ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya
error: Content is protected !!